ಶಬರಿಮಲೆ ತೀರ್ಪಿನ ಪುನರ್ ಪರಿಶೀಲನೆ: ನಾಳೆ ಸುಪ್ರೀಂ ನಿರ್ಧಾರ
Team Udayavani, Oct 22, 2018, 11:24 AM IST
ಹೊಸದಿಲ್ಲಿ : ಎಲ್ಲ ವಯೋವರ್ಗದ ಮಹಿಳೆಯರಿಗೆ ಕೇರಳದ ಪವಿತ್ರ ಕ್ಷೇತ್ರ ಶಬರಿಮಲೆಯ ದೇಗುಲಕ್ಕೆ ಪ್ರವೇಶಾವಕಾಶ ಕಲ್ಪಿಸಿರುವ ತನ್ನ ತೀರ್ಪನ್ನು ಪುನರ್ ಪರಿಶೀಲಿಸಬೇಕೆಂಬ ಮನವಿಗಳನ್ನು ಯಾವಾಗ ವಿಚಾರಣೆಗೆ ಎತ್ತಿಕೊಳ್ಳಬೇಕು ಎಂಬುದನ್ನು ತಾನು ನಾಳೆ ಮಂಗಳವಾರ ನಿರ್ಧರಿಸುವುದಾಗಿ ಸುಪ್ರೀಂ ಕೋರ್ಟ್ ಇಂದು ಸೋಮವಾರ ಹೇಳಿದೆ. ಆ ಪ್ರಕಾರ ಸುಪ್ರೀಂ ಕೋರ್ಟ್ ನಿರ್ಧಾರಕ್ಕೆಂದು ನಾಳೆ ಮಂಗಳವಾರಕ್ಕೆ ಈ ವಿಷಯ ಲಿಸ್ಟ್ ಆಗಲಿದೆ.
ಎಲ್ಲ ವಯೋವರ್ಗದ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನಕ್ಕೆ ಪ್ರವೇಶಾವಕಾಶ ಕಲ್ಪಿಸುವ ಸುಪ್ರೀಂ ಕೋರ್ಟಿನ ಸಾಂವಿಧಾನಿಕ ಪೀಠದ ತೀರ್ಪನ್ನು ಪುನರ್ ಪರಿಶೀಲಿಸುವಂತೆ ವಕೀಲ ಮ್ಯಾಥ್ಯೂಸ್ ಜೆ ನೆಡುಂಪಾರಾ ಸಲ್ಲಿಸಿದ್ದ ಅರ್ಜಿಯನ್ನು ತುರ್ತು ವಿಚಾರಣೆ ಎತ್ತಿಕೊಳ್ಳುವ ನಿಟ್ಟಿನಲ್ಲಿ ನಾಳೆ ಮಂಗಳವಾರ ನಿರ್ಧರಿಸಲಾಗುವುದು ಎಂದು ವರಿಷ್ಠ ನ್ಯಾಯಮೂರ್ತಿ ರಂಜನ್ ಗೊಗೋಯ್ ಮತ್ತು ಜಸ್ಟಿಸ್ ಎಸ್ ಕೆ ಕೌಲ್ ಅವರನ್ನು ಒಳಗೊಂಡ ಪೀಠ ಹೇಳಿತು.
“ನಮ್ಮ ಮುಂದೆ ಸುಮಾರು 19 ಪುನರ್ ವಿಮಶಾì ಕೋರಿಕೆ ಅರ್ಜಿಗಳು ಬಾಕಿ ಇವೆ ಎಂಬುದನ್ನು ನಾವು ಗಮನಿಸಿದ್ದೇವೆ; ಅಂತೆಯೇ ನಾಳೆ ಮಂಗಳವಾರ ನಾವು ಈ ಬಗ್ಗೆ ನಿರ್ಧಾರ ಕೈಗೊಳ್ಳುವೆವು’ ಎಂದು ಪೀಠ ಹೇಳಿತು.
ವಕೀಲ ನೆಡುಂಪಾರಾ ಅವರು “ನ್ಯಾಶನಲ್ ಅಯ್ಯಪ್ಪ ಡಿವೋಟೀಸ್ ಅಸೋಸಿಯೇಶನ್’ ಸಲ್ಲಿಸಿರುವ ಮೇಲ್ ಮನವಿಯನ್ನು ಉಲ್ಲೇಖೀಸಿದ್ದಾರೆ.
ಎಲ್ಲ ವಯೋವರ್ಗದ ಮಹಿಳೆಯರಿಗೆ ಶಬರಿಮಲೆ ದೇವಳ ಪ್ರವೇಶಾವಕಾಶ ಕಲ್ಪಿಸುವ ಐತಿಹಾಸಿಕ ತೀರ್ಪನ್ನು ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸಾಂವಿಧಾನಿಕ ಪೀಠ 4-1ರ ಬಹುಮತದೊಂದಿಗೆ ಈಚೆಗೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
MUST WATCH
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ