ಶಬರಿಮಲೆ ತೀರ್ಪಿನ ಪುನರ್ ಪರಿಶೀಲನೆ: ನಾಳೆ ಸುಪ್ರೀಂ ನಿರ್ಧಾರ
Team Udayavani, Oct 22, 2018, 11:24 AM IST
ಹೊಸದಿಲ್ಲಿ : ಎಲ್ಲ ವಯೋವರ್ಗದ ಮಹಿಳೆಯರಿಗೆ ಕೇರಳದ ಪವಿತ್ರ ಕ್ಷೇತ್ರ ಶಬರಿಮಲೆಯ ದೇಗುಲಕ್ಕೆ ಪ್ರವೇಶಾವಕಾಶ ಕಲ್ಪಿಸಿರುವ ತನ್ನ ತೀರ್ಪನ್ನು ಪುನರ್ ಪರಿಶೀಲಿಸಬೇಕೆಂಬ ಮನವಿಗಳನ್ನು ಯಾವಾಗ ವಿಚಾರಣೆಗೆ ಎತ್ತಿಕೊಳ್ಳಬೇಕು ಎಂಬುದನ್ನು ತಾನು ನಾಳೆ ಮಂಗಳವಾರ ನಿರ್ಧರಿಸುವುದಾಗಿ ಸುಪ್ರೀಂ ಕೋರ್ಟ್ ಇಂದು ಸೋಮವಾರ ಹೇಳಿದೆ. ಆ ಪ್ರಕಾರ ಸುಪ್ರೀಂ ಕೋರ್ಟ್ ನಿರ್ಧಾರಕ್ಕೆಂದು ನಾಳೆ ಮಂಗಳವಾರಕ್ಕೆ ಈ ವಿಷಯ ಲಿಸ್ಟ್ ಆಗಲಿದೆ.
ಎಲ್ಲ ವಯೋವರ್ಗದ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನಕ್ಕೆ ಪ್ರವೇಶಾವಕಾಶ ಕಲ್ಪಿಸುವ ಸುಪ್ರೀಂ ಕೋರ್ಟಿನ ಸಾಂವಿಧಾನಿಕ ಪೀಠದ ತೀರ್ಪನ್ನು ಪುನರ್ ಪರಿಶೀಲಿಸುವಂತೆ ವಕೀಲ ಮ್ಯಾಥ್ಯೂಸ್ ಜೆ ನೆಡುಂಪಾರಾ ಸಲ್ಲಿಸಿದ್ದ ಅರ್ಜಿಯನ್ನು ತುರ್ತು ವಿಚಾರಣೆ ಎತ್ತಿಕೊಳ್ಳುವ ನಿಟ್ಟಿನಲ್ಲಿ ನಾಳೆ ಮಂಗಳವಾರ ನಿರ್ಧರಿಸಲಾಗುವುದು ಎಂದು ವರಿಷ್ಠ ನ್ಯಾಯಮೂರ್ತಿ ರಂಜನ್ ಗೊಗೋಯ್ ಮತ್ತು ಜಸ್ಟಿಸ್ ಎಸ್ ಕೆ ಕೌಲ್ ಅವರನ್ನು ಒಳಗೊಂಡ ಪೀಠ ಹೇಳಿತು.
“ನಮ್ಮ ಮುಂದೆ ಸುಮಾರು 19 ಪುನರ್ ವಿಮಶಾì ಕೋರಿಕೆ ಅರ್ಜಿಗಳು ಬಾಕಿ ಇವೆ ಎಂಬುದನ್ನು ನಾವು ಗಮನಿಸಿದ್ದೇವೆ; ಅಂತೆಯೇ ನಾಳೆ ಮಂಗಳವಾರ ನಾವು ಈ ಬಗ್ಗೆ ನಿರ್ಧಾರ ಕೈಗೊಳ್ಳುವೆವು’ ಎಂದು ಪೀಠ ಹೇಳಿತು.
ವಕೀಲ ನೆಡುಂಪಾರಾ ಅವರು “ನ್ಯಾಶನಲ್ ಅಯ್ಯಪ್ಪ ಡಿವೋಟೀಸ್ ಅಸೋಸಿಯೇಶನ್’ ಸಲ್ಲಿಸಿರುವ ಮೇಲ್ ಮನವಿಯನ್ನು ಉಲ್ಲೇಖೀಸಿದ್ದಾರೆ.
ಎಲ್ಲ ವಯೋವರ್ಗದ ಮಹಿಳೆಯರಿಗೆ ಶಬರಿಮಲೆ ದೇವಳ ಪ್ರವೇಶಾವಕಾಶ ಕಲ್ಪಿಸುವ ಐತಿಹಾಸಿಕ ತೀರ್ಪನ್ನು ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸಾಂವಿಧಾನಿಕ ಪೀಠ 4-1ರ ಬಹುಮತದೊಂದಿಗೆ ಈಚೆಗೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್