ಇತಿಹಾಸದಲ್ಲೇ ಮೊದಲು; ಸಿಬಿಐನ ಟಾಪ್ 3 ಅಧಿಕಾರಿಗಳಿಗೆ ರಜೆ !
Team Udayavani, Oct 24, 2018, 9:51 AM IST
ಹೊಸದಿಲ್ಲಿ: ಸಿಬಿಐನ ಇಬ್ಬರು ಮುಖ್ಯ ಅಧಿಕಾರಿಗಳ ಗುದ್ದಾಟ ತೀವ್ರಗೊಂಡ ವೇಳೆಯಲ್ಲಿ ಇತಿಹಾದಲ್ಲೇ ಮೊದಲ ಬಾರಿಗೆ ಎನ್ನುವ ಹಾಗೆ ಅತ್ಯುನ್ನತಾ ತನಿಖಾ ಸಂಸ್ಥೆಯ ಪ್ರಮುಖ ಮೂವರು ಅಧಿಕಾರಿಗಳಿಗೆ ರಜೆ ನೀಡಲಾಗಿದೆ.
ಸಿಬಿಐ ಮುಖ್ಯಸ್ಥ ಅಲೋಕ್ ವರ್ಮಾ,ಸಂಸ್ಥೆಯ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನಾ ಮತ್ತು ಜಂಟಿ ನಿರ್ದೇಶಕ ಎ.ಕೆ.ಶರ್ಮಾ ಅವರನ್ನು ಕೇಂದ್ರ ಸರಕಾರ ಮಂಗಳವಾರ ರಜೆ ನೀಡಿ ಕಳುಹಿಸಿದೆ.
ಹಂಗಾಮಿ ಮುಖ್ಯಸ್ಥರನ್ನಾಗಿ ಹಾಲಿ ಸಹಾಯಕ ನಿರ್ದೇಶಕರಾಗಿದ್ದ ಎಂ.ನಾಗೇಶ್ವರ್ ರಾವ್ ಅವರನ್ನು ನೇಮಿಸಲಾಗಿದೆ.
ಮಂಗಳವಾರ ರಾತ್ರಿ ಸಂಪುಟದ ನೇಮಕಾತಿ ಸಮಿತಿಯ ವಿಶೇಷ ಸಭೆ ನಡೆಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಗೇಶ್ವರ್ ರಾವ್ ಅವರನ್ನು ಹುದ್ದೆಗೆ ನೇಮಕ ಮಾಡಿದ್ದಾರೆ.
ಮಾಂಸ ರಫ್ತುದಾರ ಮೊಯಿನ್ ಖುರೇಶಿ ಪ್ರಕರಣದ ತನಿಖೆ ಯಲ್ಲಿನ ಅಕ್ರಮಕ್ಕೆ ಸಂಬಂಧಿಸಿ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನಾ ವಿರುದ್ಧ ದೂರು ದಾಖಲಿಸಲಾಗಿದ್ದರೆ, ಸೋಮವಾರ ಡೆಪ್ಯುಟಿ ಎಸ್ಪಿ ದೇವೇಂದ್ರ ಕುಮಾರ್ರನ್ನು ಬಂಧಿಸ ಲಾಗಿತ್ತು.
ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನಾ ಹಾಗೂ ನಿರ್ದೇಶಕ ಅಲೋಕ್ ಕುಮಾರ್ರನ್ನು ಪ್ರಧಾನಿ ಕಚೇರಿಗೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಸಮನ್ಸ್ ನೀಡಿದ್ದರು.
ಅಸ್ತಾನಾ ಮತ್ತು ಅಲೋಕ್ ಕುಮಾರ್ ಅವರ ನಡುವಿನ ಹೋರಾಟ ದೆಹಲಿ ಹೈಕೋರ್ಟ್ ಮೆಟ್ಟಿಲನ್ನೂ ಏರಿದ್ದು ಇಬ್ಬರೂ ಎಫ್ಐಆರ್ ರದ್ದು ಮಾಡಲು ಮನವಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ