ಸುಪ್ರೀಂ ತೀರ್ಪಿನ ನೆಪದಲ್ಲಿ ಭಕ್ತರನ್ನು ಹತ್ತಿಕ್ಕಿದರೆ ಹುಷಾರ್; ಶಾ
Team Udayavani, Oct 27, 2018, 3:36 PM IST
ನವದೆಹಲಿ:ಶಬರಿಮಲೆ ದೇಗುಲದೊಳಗೆ ಮಹಿಳೆಯರು ಪ್ರವೇಶಿಸುವುದನ್ನು ತಡೆಗಟ್ಟಿದ ಸುಮಾರು 2,800 ಮಂದಿಯನ್ನು ಕೇರಳ ಸರ್ಕಾರ ಬಂಧಿಸಿರುವ ಕ್ರಮವನ್ನು ಕಟುವಾಗಿ ಟೀಕಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ಕೇರಳ ಸರ್ಕಾರ ಪ್ರಕರಣವನ್ನು ದುರುಪಯೋಗಪಡಿಸಿಕೊಂಡು ಬಿಜೆಪಿ ಮತ್ತು ಆರ್ ಎಸ್ ಎಸ್ ಕಾರ್ಯಕರ್ತರನ್ನು ಬಂಧಿಸಿದೆ. ಆದರೆ ಬಿಜೆಪಿ ಅಯ್ಯಪ್ಪ ಭಕ್ತರ ಜೊತೆಗೆ ಇದೆ ಎಂದು ತಿಳಿಸಿದ್ದಾರೆ.
ಶಬರಿಮಲೆ ಪ್ರತಿಭಟನೆಯನ್ನು ಸಂಪ್ರದಾಯ ಉಳಿಸಲು ನಡೆದ ಹೋರಾಟ ಎಂದು ಹೇಳಿರುವ ಶಾ, ಕೇರಳ ಸರ್ಕಾರ ಮತ್ತು ಧಾರ್ಮಿಕ ನಂಬಿಕೆಯ ನಡುವಿನ ಹೋರಾಟದಲ್ಲಿ ಕ್ರೌರ್ಯ ಮೆರೆದಿದೆ ಎಂದು ಆರೋಪಿಸಿದರು.
ಶನಿವಾರ ಕೇರಳದ ಕಣ್ಣೂರು ಜಿಲ್ಲೆಗೆ ಆಗಮಿಸಿದ್ದ ಶಾ ಬಿಜೆಪಿ ಕಚೇರಿಯನ್ನು ಉದ್ಘಾಟಿಸಿ ಮಾತನಾಡುತ್ತ, ಬಿಜೆಪಿ ಕಾರ್ಯಕರ್ತರು ಮತ್ತು ಬೆಂಬಲಿಗರನ್ನು ಕೇರಳ ಸರ್ಕಾರ ಬಂಧಿಸಿದೆ. ಸಾವಿರಾರು ಜನರನ್ನು ಜೈಲಿಗೆ ಕಳುಹಿಸಿದೆ. ನಾನು ಕೇರಳದ ಕಮ್ಯೂನಿಷ್ಟ್ ಮುಖ್ಯಮಂತ್ರಿಗೆ ಎಚ್ಚರಿಕೆ ಕೊಡುತ್ತಿದ್ದೇನೆ, ಸುಪ್ರೀಂಕೋರ್ಟ್ ತೀರ್ಪನ್ನು ಅನುಷ್ಠಾನಗೊಳಿಸುವ ನೆಪದಲ್ಲಿ ಭಕ್ತರನ್ನು ತಡೆಗಟ್ಟಬೇಡಿ ಎಂದು ಹೇಳಿದ್ದಾರೆ.
ಕೇರಳದಲ್ಲಿರುವ ದೇವಾಲಯಗಳ ಪಾವಿತ್ರ್ಯತೆಯನ್ನು ನಾಶ ಮಾಡುವ ವ್ಯವಸ್ಥಿತ ಹುನ್ನಾರ ನಡೆಸಿರುವುದಾಗಿ ದೂರಿದರು. ನಾವು ನಿಮ್ಮ ಭಾವನೆಗಳನ್ನು ಅರ್ಥ ಮಾಡಿಕೊಳ್ಳುತ್ತೇವೆ. ಈ ನಿಟ್ಟಿನಲ್ಲಿ ಅಯ್ಯಪ್ಪ ಭಕ್ತರ ಜೊತೆ ನಾವಿದ್ದೇವೆ ಎಂದು ಶಾ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ