ಭೋಪಾಲ್‌ನಲ್ಲಿ ಕಾಂಗ್ರೆಸ್‌-ಕಮಲ ಹೈಡ್ರಾಮಾ


Team Udayavani, Oct 28, 2018, 6:00 AM IST

13.jpg

ನವದೆಹಲಿ: ವಿಧಾನಸಭೆ ಚುನಾವಣೆಗೆ ಸಿದ್ಧಗೊಳ್ಳುತ್ತಿರುವ ಮಧ್ಯಪ್ರದೇಶವು ಶನಿವಾರ ಹೈವೋಲ್ಟೆಜ್‌ ರಾಜಕೀಯ ಡ್ರಾಮಾಗೆ ಸಾಕ್ಷಿಯಾಯಿತು. ನ್ಯಾಷನಲ್‌ ಹೆರಾಲ್ಡ್‌ ಗೆ ಸೇರಿದ ಜಾಗದ ಮುಂಭಾಗದಲ್ಲೇ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್‌ ಪಾತ್ರಾ ಸಾರ್ವ ಜನಿಕವಾಗಿ ಸುದ್ದಿಗೋಷ್ಠಿ ನಡೆಸಿದ್ದು ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ವಾಕ್ಸಮರಕ್ಕೆ ಕಾರಣವಾಯಿತು.

ಭೋಪಾಲ್‌ನಲ್ಲಿ ಬಿಜೆಪಿಯ ಹೈಟೆಕ್‌ ಮಾಧ್ಯಮ ಕೇಂದ್ರ ಉದ್ಘಾಟಿಸಿದ ಕೂಡಲೇ, ನ್ಯಾಷನಲ್‌ ಹೆರಾಲ್ಡ್‌ಗೆ ಸೇರಿದ ಭೂಮಿಯ ಮುಂದೆಯೇ ಟೆಂಟ್‌ ನಿರ್ಮಿಸಿ ವಕ್ತಾರ ಸಂಬಿತ್‌ ಪಾತ್ರಾ ಅವರು ಸುದ್ದಿಗೋಷ್ಠಿ ನಡೆಸಿದರು. ಜತೆಗೆ, ನನ್ನ ಹಿಂಭಾಗದಲ್ಲಿರುವ ಭೂಮಿಯು “ಭಾರೀ ಭ್ರಷ್ಟಾಚಾರದ ಸ್ಮಾರಕ’ ಎಂದು ಬಣ್ಣಿಸಿ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಮೇಲಿರುವ ಆರೋಪಗಳ ಕುರಿತೂ ವಿವರಿಸಿದರು. ಇದರಿಂದ ಕೆಂಡಾಮಂಡಲ ಗೊಂಡ ಕಾಂಗ್ರೆಸ್‌, ಖಾಸಗಿ ಭೂಮಿಯಲ್ಲಿ ಅನುಮತಿಯಿಲ್ಲದೇ ಸುದ್ದಿಗೋಷ್ಠಿ ನಡೆಸುವ ಮೂಲಕ ಬಿಜೆಪಿ ನೀತಿ ಸಂಹಿತೆ ಉಲ್ಲಂ ಸಿದೆ. ಈ ಬಗ್ಗೆ ನಾವು ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ಹೇಳಿತು. ಅಲ್ಲದೆ, ಕಾಂಗ್ರೆಸ್‌ ವಕ್ತಾರ ಜೆ.ಪಿ. ಧನೋಪಿಯಾ ಅವರು ಸ್ಥಳಕ್ಕೆ ದೌಡಾಯಿಸಿದ್ದು, ಬಿಜೆಪಿ ಕಾರ್ಯಕರ್ತರನ್ನು ತರಾಟೆಗೆ ತೆಗೆದುಕೊಂಡು. ಈ ವೇಳೆ ಎರಡೂ ಕಡೆ ಮಾತಿನ ಚಕಮಕಿಯೂ ನಡೆಯಿತು. ಇದಾದ ಬೆನ್ನಲ್ಲೇ ಬಿಜೆಪಿ ವಕ್ತಾರ ರಾಹುಲ್‌ ಕೊಥಾರಿ ಅವರು, ಕಾರ್ಯಕ್ರಮಕ್ಕೆ ಪಡೆದಿದ್ದ ಅನುಮತಿ ಪತ್ರವನ್ನು ಸಾರ್ವಜನಿಕರಿಗೆ ಪ್ರದರ್ಶಿಸಿದ ಘಟನೆಯೂ ನಡೆಯಿತು. 

ತಾರಿಕ್‌ ಕಾಂಗ್ರೆಸ್‌ಗೆ: ಈ ನಡುವೆ, ಕಳೆದ ತಿಂಗಳಷ್ಟೇ ಎನ್‌ಸಿಪಿ ತೊರೆದಿದ್ದ ಮಹಾರಾಷ್ಟ್ರದ ಮಾಜಿ ಸಂಸದ ತಾರಿಕ್‌ ಅನ್ವರ್‌ ಶನಿವಾರ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದಾರೆ. ರಫೇಲ್‌ ಡೀಲ್‌ ವಿಚಾರದಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಅವರು ಪ್ರಧಾನಿ ಮೋದಿ ಬೆಂಬಲಕ್ಕೆ ನಿಂತದ್ದರಿಂದ ಆಕ್ರೋಶಗೊಂಡು ಅನ್ವರ್‌ ಎನ್‌ಸಿಪಿಗೆ ರಾಜೀನಾಮೆ ನೀಡಿದ್ದರು. ಇದೇ ವೇಳೆ, ತೆಲಂಗಾಣದಲ್ಲೂ ಟಿಆರ್‌ಎಸ್‌ನ ಇಬ್ಬರು ಹಿರಿಯ ನಾಯಕರು ಕಾಂಗ್ರೆಸ್‌ಗೆ ಸೇರ್ಪಡೆ ಗೊಂಡಿದ್ದಾರೆ.

ಮೊದಲ ಹಂತದಲ್ಲಿ 1900 ಅಭ್ಯರ್ಥಿಗಳು: ನ.12ರಂದು ಛತ್ತೀಸ್‌ಗಡದಲ್ಲಿ ಮೊದಲ ಹಂತದ ಮತದಾನ ನಡೆಯಲಿದ್ದು, 18 ಕ್ಷೇತ್ರಗಳಿಗೆ ನಡೆಯುವ ಹಣಾಹಣಿಯಲ್ಲಿ ಸಿಎಂ ರಮಣ್‌ಸಿಂಗ್‌ ಸೇರಿದಂತೆ 190 ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ನಾಮಪತ್ರ ವಾಪಸ್‌ ಪಡೆ ಯಲು ಗಡುವು ಶುಕ್ರವಾರ ಪೂರ್ಣಗೊಂಡಿದೆ. 

ನಿವೃತ್ತ ಸೇನಾನಿಗಳ ಜತೆ ರಾಹುಲ್‌ ಮಾತುಕತೆ
ಎಐಸಿಸಿ ಪ್ರಧಾನ ಕಚೇರಿಯಲ್ಲಿ ಶನಿವಾರ ರಾಹುಲ್‌ ಗಾಂಧಿ ಅವರು ನಿವೃತ್ತ ಯೋಧರೊಂದಿಗೆ 30 ನಿಮಿಷಗಳ ಸಂವಾದ ನಡೆಸಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ಸಮಾನ ಹುದ್ದೆ, ಸಮಾನ ಪಿಂಚಣಿ ವಿಚಾರದಲ್ಲಿ ನೀಡಿರುವಂಥ ಆಶ್ವಾಸನೆಯನ್ನು ಪೂರೈಸುತ್ತೇವೆ ಎಂದು ಅವರು ಭರವಸೆ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ, ಅಧಿಕಾರ ಕಳೆದುಕೊಂಡ ನಾಲ್ಕೂವರೆ ವರ್ಷಗಳ ಬಳಿಕ ರಾಹುಲ್‌ಗೆ ಸೇನಾನಿಗಳು ನೆನಪಾದರೇ ಎಂದು ಪ್ರಶ್ನಿಸಿದೆ.

ಈವರೆಗೆ ಕಾಂಗ್ರೆಸ್‌ ಜತೆಗೆ ಕೈಜೋಡಿಸಿದ ಯಾವ ಪಕ್ಷವೂ ಉಳಿದಿಲ್ಲ. ಪ್ರತಿಪಕ್ಷಗಳೆಲ್ಲ ಒಂದಾದರೂ, ಕೊನೆಗೆ ಎಲ್ಲ ಪಕ್ಷಗಳಿಗೆ ಕಾಂಗ್ರೆಸ್‌ ದ್ರೋಹ ಬಗೆದ ಬಳಿಕ ಎಂಥ ಸ್ಥಿತಿ ಬರುತ್ತದೆಂದರೆ, ಪ್ರಾದೇಶಿಕ ಪಕ್ಷಗಳೆಲ್ಲ ಸೇರಿ “ಮಿ ಟೂ’ ಎಂದು ಬೊಬ್ಬಿಡಬೇಕಾಗುತ್ತದೆ.
 ರಾಜನಾಥ್‌ ಸಿಂಗ್‌, ಕೇಂದ್ರ ಗೃಹ ಸಚಿವ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.