ಮಹಾಮೈತ್ರಿಯಿಂದ ದೇಶ ವಿಭಜನೆ: ಶಾ ಆರೋಪ
Team Udayavani, Oct 29, 2018, 8:45 AM IST
ಹೈದರಾಬಾದ್/ಹೊಸದಿಲ್ಲಿ: ಪ್ರತಿಪಕ್ಷಗಳ ಮಹಾಘಟಬಂಧನ್ ಎನ್ನುವುದು ದೊಡ್ಡ ವಂಚನೆಯಾಗಿದ್ದು, ಮೋದಿ ಸರಕಾರವು “ಮೇಕಿಂಗ್ ಇಂಡಿಯಾ'(ದೇಶ ನಿರ್ಮಾಣ)ದತ್ತ ಹೆಜ್ಜೆಯಿಟ್ಟರೆ, ಪ್ರತಿಪಕ್ಷಗಳು “ಬ್ರೇಕಿಂಗ್ ಇಂಡಿಯಾ'(ದೇಶ ವಿಭಜನೆ) ಮಾಡಲು ಹೊರಟಿವೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಆರೋಪಿಸಿದ್ದಾರೆ.
ರವಿವಾರ ಸಂಜೆ ಹೈದರಾಬಾದ್ನಲ್ಲಿ ಭಾರತೀಯ ಜನತಾ ಯುವ ಮೋರ್ಚಾ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿದ ಅವರು, ಮೋದಿ ಅವರು ಬಡತನ, ನಿರುದ್ಯೋಗ, ಅಭದ್ರತೆ ನಿರ್ಮೂಲನೆ ಮಾಡಿ ಎಂದು ಹೇಳುತ್ತಿದ್ದರೆ, ಪ್ರತಿಪಕ್ಷಗಳ ನಾಯಕರು ಮೋದಿಯವರನ್ನೇ ನಿರ್ಮೂಲನೆ ಮಾಡಿ ಎಂದು ಬೊಬ್ಬಿಡುತ್ತಿದ್ದಾರೆ.
ಮಹಾಮೈತ್ರಿಗೆ ನೀತಿಯೂ ಇಲ್ಲ, ನಾಯಕನೂ ಇಲ್ಲ, ತತ್ವಗಳೂ ಇಲ್ಲ ಎಂದೂ ಶಾ ಲೇವಡಿ ಮಾಡಿದರು.
ಗದ್ದರ್ ಸ್ಪರ್ಧೆ: ಇದೇ ವೇಳೆ, ಕ್ರಾಂತಿಕಾರಿ ತೆಲುಗು ಕವಿ ಗುಮ್ಮಡಿ ವಿಠಲ್ ರಾವ್ ಅಲಿಯಾಸ್ ಗದ್ದರ್ ಅವರು ಈ ಬಾರಿಯ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇತರೆ ರಾಜಕೀಯ ಪಕ್ಷಗಳು ಬೆಂಬಲ ನೀಡಿದರೆ, ಸಿಎಂ ಕೆಸಿ ಚಂದ್ರಶೇಖರ್ ರಾವ್ ವಿರುದ್ಧ ಕಣಕ್ಕಿಳಿಯುತ್ತೇನೆ ಎಂದಿದ್ದಾರೆ ಗದ್ದರ್.
ರಾಹುಲ್ಗೆ ರಾಜೇ ಸವಾಲು: ಏತನ್ಮಧ್ಯೆ, ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಮುಖ್ಯಮಂತ್ರಿ ಹುದ್ದೆಗಳಲ್ಲಿ ಶೇ.50ರಷ್ಟು ಪಾಲು ಮಹಿಳೆಯರಿಗೆ ನೀಡಲಾಗುತ್ತದೆ ಎಂಬ ಕಾಂಗ್ರೆಸ್ ಅಧ್ಯಕ್ಷ ರಾಹುಲ್ಗಾಂಧಿ ಹೇಳಿಕೆಗೆ ರಾಜಸ್ಥಾನ ಸಿಎಂ ವಸುಂಧರಾ ರಾಜೇ ತಿರುಗೇಟು ನೀಡಿದ್ದಾರೆ. ರಾಹುಲ್ರದ್ದು ಬರೀ ಸುಳ್ಳು. ಕಾಂಗ್ರೆಸ್ ಆಡಳಿತವಿರುವ ಯಾವ ರಾಜ್ಯದಲ್ಲಿ ಮಹಿಳಾ ಸಿಎಂಗಳಿದ್ದಾರೆ ಎಂದು ಅವರು ಉತ್ತರಿಸುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ ರಾಜೇ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
MUST WATCH
ಹೊಸ ಸೇರ್ಪಡೆ
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ
Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ
Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್