ಹಿಂದೂ ಅರಸನ ಆಳ್ವಿಕೆಯಡಿ ಕಾಶ್ಮೀರ ಶಾಂತಿಯಿಂದಿತ್ತು: ಯೋಗಿ ಆದಿತ್ಯನಾಥ
Team Udayavani, Oct 29, 2018, 5:01 PM IST
ಲಕ್ನೋ : ” ಹಿಂದೂ ಅರಸನ ಆಳ್ವಿಕೆ ಇದ್ದಷ್ಟು ಕಾಲ ಜಮ್ಮು ಕಾಶ್ಮೀರದಲ್ಲಿ ಶಾಂತಿ ನೆಲೆಸಿತ್ತು. ಹಿಂದೂ ಆಳ್ವಿಕೆ ಮುಗಿದ ಬಳಿಕ ಹಿಂದೂ ಸಮುದಾಯದವರು ಪತನವನ್ನು ಕಂಡರು” ಎಂದು ಹೇಳುವ ಮೂಲಕ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿವಾದ ಸೃಷ್ಟಿಸಿದ್ದಾರೆ.
ಭಾರತೀಯ ಜನತಾ ಪಕ್ಷದ ಸಿಕ್ಖ್ ಸಮಾಗಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಸಿಎಂ ಯೋಗಿ, “ಜಮ್ಮು ಕಾಶ್ಮೀರದ ಸ್ಥಿತಿ ಇವತ್ತು ಏನಾಗಿದೆ ? ಅಲ್ಲಿನ ಜನರು ತಾವು ಸುರಕ್ಷಿತರಿದ್ದೇವೆ ಎಂದು ಹೇಳಲು ಸಾಧ್ಯವೇ ? ಇಲ್ಲ; ನಾವು ಇತಿಹಾಸದಿಂದ ಕಲಿಯಬೇಕಾಗಿದೆ ” ಎಂದು ಹೇಳಿದರು.
ಕೆಲ ದಿನಗಳ ಹಿಂದಷ್ಟೇ ಬಿಜೆಪಿ ನಾಯಕ, ಕೇಂದ್ರ ಸಚಿವ ಜೀತೇಂದ್ರ ಸಿಂಗ್ ಅವರು ಜಮ್ಮು ಕಾಶ್ಮೀರ ರಾಜಕಾರಣಿಗಳನ್ನು ಟೀಕಿಸುತ್ತಾ, “ಮುಖ್ಯವಾಹಿನಿಯ ಕಾಶ್ಮೀರೀ ರಾಜಕಾರಣಿಗಳು ಶೌಚಾಲಯಕ್ಕೆ ಹೋಗಬೇಕಿದ್ದರೂ ಹುರಿಯತ್ ಕಾನ್ಫರೆನ್ಸ್ ಅನುಮತಿಯನ್ನು ಪಡೆಯಬೇಕಾಗಿದೆ ” ಎಂದು ಹೇಳಿದ್ದರು.
ಕೆಲ ದಿನಗಳ ಹಿಂದೆ ಕಾಶ್ಮೀರಿ ಯುವಕರ ಕಲ್ಲೆಸೆವ ಗಂಪಿನ ದಾಳಿಗೆ ಗುರಿಯಾಗಿ ತಲೆಗೆ ಗಂಭೀರು ಏಟು ಪಡೆದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಸಿಪಾಯ್ ರಾಜೇಂದ್ರ ಸಿಂಗ್ ಅವರ ನಿಧನಕ್ಕೆ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಉಮರ್ ಅಬ್ದುಲ್ಲ ಮತ್ತು ಮೆಹಬೂಬ ಮುಫ್ತಿ ಏಕೆ ಸುಮ್ಮಗಿದ್ದಾರೆ ಎಂದು ಕೇಳಲಾದ ಪ್ರಶ್ನೆಗೆ ಸಚಿವ ಜೀತೇಂದ್ರ ಸಿಂಗ್ ಪ್ರತಿಕ್ರಿಯಿಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ