ಸಿಬಿಐ ವಿವಾದ, ಅಲೋಕ್ ಗೆ ಬೆಂಬಲ; ಸುಪ್ರೀಂ ಮೆಟ್ಟಿಲೇರಿದ ಖರ್ಗೆ
Team Udayavani, Nov 3, 2018, 3:52 PM IST
ನವದೆಹಲಿ:ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆ ನೀಡಿ ಕಳುಹಿಸಿರುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಕಾಂಗ್ರೆಸ್ ಅಖಾಡಕ್ಕಿಳಿದಿದ್ದು, ಕೇಂದ್ರ ಸರ್ಕಾರ ಸಿಬಿಐ ಕಾನೂನನ್ನು ಉಲ್ಲಂಘಿಸಿದ್ದು ಇದು ಕಾನೂನು ಬಾಹಿರ ಎಂದು ಹೇಳಿರುವ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಶನಿವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಖರ್ಗೆಯವರು ಸಲ್ಲಿಸಿರುವ ಅರ್ಜಿಯಲ್ಲಿ, ಕಾನೂನು ಪ್ರಕಾರ ಸಿಬಿಐ ನಿರ್ದೇಶಕರನ್ನು ವಜಾಗೊಳಿಸಲು ಲೋಕಸಭೆಯ ವಿರೋಧ ಪಕ್ಷದ ಮುಖಂಡ, ಪ್ರಧಾನಿ ಹಾಗೂ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯನ್ನೊಳಗೊಂಡ ತ್ರಿಸದಸ್ಯ ಸಮಿತಿ ಮಾತ್ರ ನಿರ್ಧಾರ ಕೈಗೊಳ್ಳಬೇಕಾಗಿದೆ.
ಸಿಬಿಐ ನಿರ್ದೇಶಕರ ವಿರುದ್ಧ ಕ್ರಮ ಕೈಗೊಳ್ಳಲು ಸೆಂಟ್ರಲ್ ವಿಜಿಲೆನ್ಸ್ ಕಮಿಷನ್(ಸಿವಿಸಿ) ಗೆ ಯಾವುದೇ ಅಧಿಕಾರ ಇಲ್ಲ ಎಂಬುದಾಗಿ ತಿಳಿಸಿದ್ದಾರೆ.
ಅಲೋಕ್ ವರ್ಮಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸ್ವಯಂ ನಿರ್ಧಾರದ ಮೂಲಕ ರಜೆಯ ಮೇಲೆ ಕಳುಹಿಸಲು ಕೈಗೊಂಡ ನಿರ್ಧಾರ ಸಿಬಿಐ ಕಾಯ್ದೆ ಪ್ರಕಾರ ಕಾನೂನು ಬಾಹಿರವಾಗಿದೆ. ಈ ಹಿನ್ನೆಲೆಯಲ್ಲಿ ತಾನು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿರುವುದಾಗಿ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್