ಸಿಬಿಐ ಮುಖ್ಯಸ್ಥರಿಗೆ ಕಡ್ಡಾಯ ರಜೆ: ಸುಪ್ರೀಂ ಮೊರೆ ಹೋದ ಖರ್ಗೆ
Team Udayavani, Nov 4, 2018, 6:00 AM IST
ಹೊಸದಿಲ್ಲಿ: ಸಿಬಿಐ ನಿರ್ದೇಶಕರನ್ನು ರಾತೋರಾತ್ರಿ ಕಡ್ಡಾಯ ರಜೆ ಮೇಲೆ ಕಳುಹಿಸಿದ ವಿಚಾರ ಸುಪ್ರೀಂ ಕೋರ್ಟ್ ಮೆಟ್ಟಿ
ಲೇರಿದೆ. ಸಿಬಿಐ ನಿರ್ದೇಶಕರ ಆಯ್ಕೆ ಸಮಿತಿಯಲ್ಲಿದ್ದ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರೇ ಸುಪ್ರೀಂ ಕದ ಬಡಿದಿದ್ದಾರೆ. ಕೇಂದ್ರ ಸರಕಾರದ ಈ ಏಕಪಕ್ಷೀಯ ನಿರ್ಧಾರ ಅಕ್ರಮ ಎಂದು ಖರ್ಗೆ ಅರ್ಜಿ ಸಲ್ಲಿಸಿದ್ದಾರೆ. ಕೇಂದ್ರ ಅಥವಾ ವಿಚಕ್ಷಣ ದಳ ತಮ್ಮ ವ್ಯಾಪ್ತಿ ಮೀರಿ ಈ ನಿರ್ಧಾರಕ್ಕೆ ಬಂದಿವೆ ಎಂದು ಅರ್ಜಿಯಲ್ಲಿ ಆರೋಪಿಸಿದ್ದಾರೆ. ರಫೇಲ್ ಡೀಲ್ ಸಂಬಂಧ ಅವರು ತನಿಖೆಗೆ ಸಿದ್ಧರಾಗುತ್ತಿರುವಾಗಲೇ ಈ ನಿರ್ಧಾರ ತೆಗೆದು ಕೊಳ್ಳಲಾಗಿದೆ ಎಂದೂ ಆರೋಪಿಸಿದ್ದಾರೆ.
ಕೇಂದ್ರ ಸರಕಾರದ ಕ್ರಮ ನಿರಂಕುಶ, ಅಕ್ರಮ ಎಂದಿರುವ ಖರ್ಗೆ, ಪ್ರಮುಖ ಪ್ರಕರಣಕ್ಕಾಗಿ ಸಿದ್ಧವಾಗುತ್ತಿದ್ದ ಹಾಲಿ ನಿರ್ದೇಶಕ ರನ್ನು ಅಸಾಧಾರಣ ಪರಿಸ್ಥಿತಿಯಲ್ಲಿ ಆಯ್ಕೆ ಸಮಿತಿಯ ಒಪ್ಪಿಗೆ ಪಡೆಯದೆ ರಜೆಯಲ್ಲಿ ಕಳು ಹಿಸಲಾಗಿದೆ ಎಂದೂ ಅರ್ಜಿಯಲ್ಲಿ ಪ್ರಸ್ತಾವಿಸಿ ದ್ದಾರೆ. ಅವರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸುವಾಗ ಆಯ್ಕೆ ಸಮಿತಿಯ ಗಮನಕ್ಕೆ ತಂದಿಲ್ಲ ಎಂದು ಆಕ್ಷೇಪಿಸಿದ್ದಾರೆ.
ಜಾಮೀನಿಗೆ ನಕಾರ
ಈ ನಡುವೆ ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನಾ ಒಳಗೊಂಡ ಲಂಚ ಪ್ರಕರಣದಲ್ಲಿ ಬಂಧಿತನಾಗಿರುವ ಮಧ್ಯವರ್ತಿ ಮನೋಜ್ ಪ್ರಸಾದ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದಿಲ್ಲಿ ಕೋರ್ಟ್ ನಿರಾಕರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ