ಛತ್ತೀಸ್ಗಢ: ಬಸ್ ಸ್ಫೋಟಕ್ಕೆ 5 ಬಲಿ
Team Udayavani, Nov 9, 2018, 5:08 AM IST
ದಂತೇವಾಡ: ಚುನಾವಣಾ ಅಖಾಡವಾಗಿರುವ ಛತ್ತೀಸ್ಗಢದ ದಂತೇವಾಡ ಜಿಲ್ಲೆಯ ಬಚೇಲಿಯಲ್ಲಿ ನಕ್ಸಲರು ಬಸ್ಸೊಂದನ್ನು ಸ್ಫೋಟಿಸಿದ್ದು, ಸಿಐಎಸ್ಎಫ್ ಯೋಧ ಸಹಿತ ಐವರು ಸಾವನ್ನಪ್ಪಿದ್ದಾರೆ.
ಮೃತರಲ್ಲಿ ಬಸ್ ಚಾಲಕ, ನಿರ್ವಾಹಕ ಮತ್ತು ಕ್ಲೀನರ್ ಹಾಗೂ ಓರ್ವ ಚುನಾವಣಾ ಸಿಬಂದಿ ಸೇರಿದ್ದಾರೆ. ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಮೊದಲ ಹಂತದ ಮತದಾನಕ್ಕೆ 4 ದಿನ (ನ. 12) ಬಾಕಿಯಿರುವಂತೆಯೇ ಈ ಘಟನೆ ನಡೆದಿದೆ. ಖಾಸಗಿ ಸಂಸ್ಥೆಯ ಬಸ್ಸನ್ನು ಚುನಾವಣಾ ಕರ್ತವ್ಯದಲ್ಲಿರುವ ಸಿಐಎಸ್ಎಫ್ ಸೇವೆಗಾಗಿ ಬಳಸಲಾಗುತ್ತಿತ್ತು. ಗುರುವಾರ, ಬೈಲಾಡಿಲಾ ಗಣಿಗಾರಿಕೆ ವಲಯದಲ್ಲಿ ಈ ಬಸ್ ಸಂಚರಿಸುತ್ತಿದ್ದಾಗ ನಕ್ಸಲರು ಬಾಂಬ್ ದಾಳಿ ನಡೆಸಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಭದ್ರತೆಯ ಸವಾಲು: ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ಮೋದಿ ಶುಕ್ರವಾರ ಜಗದಾಳ್ಪುರಕ್ಕೆ ಆಗಮಿಸಲಿದ್ದು, ಅಂದು ನಡೆಯಲಿರುವ ರ್ಯಾಲಿಯ ಸ್ಥಳದಿಂದ 100 ಕಿ.ಮೀ. ದೂರದಲ್ಲಿ ಗುರುವಾರದ ಸ್ಫೋಟ ಸಂಭವಿಸಿದೆ. ಹೀಗಾಗಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!