ಛತ್ತೀಸ್ಗಢ: ಬಸ್ ಸ್ಫೋಟಕ್ಕೆ 5 ಬಲಿ
Team Udayavani, Nov 9, 2018, 5:08 AM IST
ದಂತೇವಾಡ: ಚುನಾವಣಾ ಅಖಾಡವಾಗಿರುವ ಛತ್ತೀಸ್ಗಢದ ದಂತೇವಾಡ ಜಿಲ್ಲೆಯ ಬಚೇಲಿಯಲ್ಲಿ ನಕ್ಸಲರು ಬಸ್ಸೊಂದನ್ನು ಸ್ಫೋಟಿಸಿದ್ದು, ಸಿಐಎಸ್ಎಫ್ ಯೋಧ ಸಹಿತ ಐವರು ಸಾವನ್ನಪ್ಪಿದ್ದಾರೆ.
ಮೃತರಲ್ಲಿ ಬಸ್ ಚಾಲಕ, ನಿರ್ವಾಹಕ ಮತ್ತು ಕ್ಲೀನರ್ ಹಾಗೂ ಓರ್ವ ಚುನಾವಣಾ ಸಿಬಂದಿ ಸೇರಿದ್ದಾರೆ. ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಮೊದಲ ಹಂತದ ಮತದಾನಕ್ಕೆ 4 ದಿನ (ನ. 12) ಬಾಕಿಯಿರುವಂತೆಯೇ ಈ ಘಟನೆ ನಡೆದಿದೆ. ಖಾಸಗಿ ಸಂಸ್ಥೆಯ ಬಸ್ಸನ್ನು ಚುನಾವಣಾ ಕರ್ತವ್ಯದಲ್ಲಿರುವ ಸಿಐಎಸ್ಎಫ್ ಸೇವೆಗಾಗಿ ಬಳಸಲಾಗುತ್ತಿತ್ತು. ಗುರುವಾರ, ಬೈಲಾಡಿಲಾ ಗಣಿಗಾರಿಕೆ ವಲಯದಲ್ಲಿ ಈ ಬಸ್ ಸಂಚರಿಸುತ್ತಿದ್ದಾಗ ನಕ್ಸಲರು ಬಾಂಬ್ ದಾಳಿ ನಡೆಸಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಭದ್ರತೆಯ ಸವಾಲು: ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ಮೋದಿ ಶುಕ್ರವಾರ ಜಗದಾಳ್ಪುರಕ್ಕೆ ಆಗಮಿಸಲಿದ್ದು, ಅಂದು ನಡೆಯಲಿರುವ ರ್ಯಾಲಿಯ ಸ್ಥಳದಿಂದ 100 ಕಿ.ಮೀ. ದೂರದಲ್ಲಿ ಗುರುವಾರದ ಸ್ಫೋಟ ಸಂಭವಿಸಿದೆ. ಹೀಗಾಗಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ