ಪವಿತ್ರ ಅಯೋಧ್ಯೆಯಲ್ಲಿ ಮದ್ಯ, ಮಾಂಸ ಮಾರಾಟ ನಿಷೇಧಕ್ಕೆ ಚಿಂತನೆ
Team Udayavani, Nov 12, 2018, 11:48 AM IST
ಲಕ್ನೋ : ಉತ್ತರ ಪ್ರದೇಶದ ಫೈಜಾಬಾದ್ಗೆ ಆಯೋಧ್ಯೆ ಎಂದು ನಾಮಕರಣದ ಕೆಲವೇ ದಿನಗಳ ತರುವಾಯ ಇದೀಗ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆ ಜಿಲ್ಲೆಯಲ್ಲಿ ಮಾಂಸ, ಮದ್ಯ ಮಾರಾಟದ ಮೇಲೇ ನಿಷೇಧ ಹೇರುವ ಚಿಂತನೆ ನಡೆಸುತ್ತಿದ್ದಾರೆ.
ಅಯೋಧ್ಯೆಯ ಸಾಧು ಸಂತರು ಜಿಲ್ಲೆಯಲ್ಲಿ ಮಾಂಸ, ಮಧ್ಯ ಮಾರಾಟವನ್ನು ನಿಷೇಧಿಸಬೇಕೆಂದು ಸಿಎಂ ಆದಿತ್ಯನಾಥ್ ಅವರನ್ನು ಒತ್ತಾಯಿಸಿದ್ದಾರೆ.
ಅಯೋಧ್ಯೆಯಲ್ಲಿನ ಸಾಧು ಸಂತರ ಈ ಆಗ್ರಹದ ಬಗ್ಗೆ ಸರಕಾರಕ್ಕೆ ಅರಿವಿದೆ; ಅಂತೆಯೇ ಈ ಪ್ರಸ್ತಾವವನ್ನು ಪರಿಗಣಿಸುವ ದಿಶೆಯಲ್ಲಿ ಚಿಂತನೆ ನಡೆಯುತ್ತಿದೆ ಎಂದು ಯುಪಿ ಸರಕಾರದ ವಕ್ತಾರ ಶ್ರೀಕಾಂತ್ ಶರ್ಮಾ ಹೇಳಿದ್ದಾರೆ.
ಕಾನೂನು ಚೌಕಟ್ಟಿನಲ್ಲೇ ಅಯೋಧ್ಯೆ ಜಿಲ್ಲೆಯಲ್ಲಿ ಮದ್ಯ ಮಾಂಸ ಮಾರಾಟವನ್ನು ನಿಷೇಧಿಸಲಾಗುವುದು ಎಂದು ಶರ್ಮಾ ಹೇಳಿದರು.
“ಅಯೋಧ್ಯೆಯು ಪವಿತ್ರ ಜಿಲ್ಲೆಯಾಗಿದೆ. ನಗರದಲ್ಲಿ ಈ ಹಿಂದೆಂದೂ ಮಾಂಸ ಮದ್ಯ ಮಾರಾಟ ನಡೆಯುತ್ತಿರಲಿಲ್ಲ. ಇವುಗಳ ಮೇಲೆ ಅಧಿಕೃತ ನಿಷೇಧ ಹೇರಿದರೆ ಜಿಲ್ಲೆಯ ಜನಜೀವನ ಆರೋಗ್ಯಕರವಾಗುವುದರಲ್ಲಿ ಸಂದೇಹವಿಲ್ಲ’ ಎಂದು ಆಚಾರ್ಯ ಸತ್ಯೇಂದ್ರ ದಾಸ್ ಹೇಳಿರುವುದನ್ನು ಉಲ್ಲೇಖೀಸಿ ಎಎನ್ಐ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ