ಬಿಜೆಪಿ ಕೊಡುವ 1 ಲಕ್ಷ ಗೋವಿನಲ್ಲಿ ನನಗೂ ಒಂದು ಸಿಕ್ಕೀತೇ? ಓವೈಸಿ
Team Udayavani, Nov 12, 2018, 4:19 PM IST
ಹೈದರಾಬಾದ್ : ‘ತೆಲಂಗಾಣ ಮತದಾರರಿಗೆ ಭಾರತೀಯ ಜನತಾ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರತಿ ವರ್ಷ ಒಂದು ಲಕ್ಷ ಗೋವುಗಳನ್ನು ಉಚಿತವಾಗಿ ಪೂರೈಸುವ ಭರವಸೆ ನೀಡಿದೆ. ಇದರಲ್ಲಿ ಬಿಜೆಪಿಯವರು ನನಗೂ ಒಂದು ಗೋವನ್ನು ಕೊಡುತ್ತಾರೆಯೇ ?’ ಎಂದು ಆಲ್ ಇಂಡಿಯಾ ಮಜ್ಲಿಸ್ ಎ ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ.
“ಬಿಜೆಪಿ ತೆಲಂಗಾಣದ ಮತದಾರರಿಗೆ ಉಚಿತವಾಗಿ 1 ಲಕ್ಷ ಗೋವುಗಳನ್ನು ಕೊಡುವುದಾಗಿ ಭರವಸೆ ನೀಡಿದೆ. ಅದರಲ್ಲಿ ನನಗೂ ಒಂದು ಗೋವನ್ನು ಅವರು ಕೊಡುತ್ತಾರೆಯೇ ? ಅವರು ನನಗೆ ಒಂದು ಗೋವನ್ನು ಕೊಟ್ಟರೆ ನಾನು ಅದನ್ನು ಗೌರವದಿಂದ ಸಾಕುತ್ತೇನೆ ಎಂಬ ಭರವಸೆಯನ್ನು ನೀಡುತ್ತೇನೆ. ಇದು ನಗಾಡುವ, ತಮಾಷೆಯ ವಿಷಯ ಅಲ್ಲ; ಇದರ ಬಗ್ಗೆ ಸ್ವಲ್ಪ ಯೋಚಿಸಿ ನೋಡಿ’ ಎಂದು ಓವೈಸಿ ಗಂಭೀರವಾಗಿಯೇ ಹೇಳಿದರು.
ಬಿಜೆಪಿಯ ಚುನಾವಣಾ ಪ್ರಣಾಳಿಕೆ ಸಮಿತಿಯ ಅಧ್ಯಕ್ಷ ಎನ್ವಿಎಸ್ಎಸ್ ಪ್ರಭಾಕರ್ ಅವರು “ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ತೆಲಂಗಾಣ ಮತದಾರರಿಗೆ ಹಬ್ಬ ಮತ್ತು ಇತರ ಸಂದರ್ಭಗಳಲ್ಲಿ, ಯಾರಿಗೆ ಅಗತ್ಯ ಉಂಟೋ ಅವರಿಗೆ, ಗೋವು ನೀಡಲು ಉದ್ದೇಶಿಸಿದೆ’ ಎಂದು ಹೇಳಿದ್ದಾರೆ.
ಈಚೆಗೆ ಬರ್ಖಾಸ್ತು ಗೊಂಡ ರಾಜ್ಯ ವಿಧಾನಸಭೆಯಲ್ಲಿ ಶಾಸಕರಾಗಿದ್ದ ಪ್ರಭಾಕರ್ ಅವರು ಕೃಷಿ ಮತ್ತು ಗ್ರಾಮೀಣ ಆರ್ಥಿಕತೆಯಲ್ಲಿ ಅಗತ್ಯವಿರುವ ಗೋವುಗಳ ಸಂಖ್ಯೆಯನ್ನು ಪಟ್ಟಿ ಮಾಡಿ ವರ್ಷಂಪ್ರತಿ ತೆಲಂಗಾಣ ಮತದಾರರಿಗೆ 1 ಲಕ್ಷ ಗೋವುಗಳನ್ನು ನೀಡುವುದಾಗಿ ಹೇಳಿದ್ದಾರೆ.
ಪ್ರಭಾಕರ್ ಅವರು ಮುಂದುವರಿದು “ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಿನಿ ಭಾರತ ಭಾಷಾ ಕಲ್ಯಾಣ ಮಂಡಳಿಯನ್ನು ಸ್ಥಾಪಿಸಲಾಗುವುದು; ಈ ಮಂಡಳಿಯು ಇತರ ರಾಜ್ಯಗಳಿಂದ ಹೈದರಾಬಾದಿಗೆ ಉದ್ಯೋಗಾರ್ಥವಾಗಿ ಬರುವ ಭಾಷಾ ಅಲ್ಪಸಂಖ್ಯಾಕರ ಕಲ್ಯಾಣಕ್ಕೆ ಶ್ರಮಿಸುವುದು’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
MUST WATCH
ಹೊಸ ಸೇರ್ಪಡೆ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ