ಮನೆಯೊಳಗೆ ಕಾಲಿಡಲು ಬಿಡದ ತಂದೆಯನ್ನು ಬೆಂಕಿ ಹಚ್ಚಿ ಕೊಂದ ಮಗ!
Team Udayavani, Nov 12, 2018, 4:43 PM IST
ಚೆನ್ನೈ: ಮನೆಯೊಳಗೆ ಮಲಗಲು ಅವಕಾಶ ಕೊಡುವುದಿಲ್ಲ ಎಂದ ತಂದೆಯ ಮೈಮೇಲೆ ಕಟುಕ ಮಗ ಪೆಟ್ರೋಲ್ ಸುರಿದು ಜೀವಂತವಾಗಿ ಸುಟ್ಟು ಹಾಕಿದ ಹೃದಯವಿದ್ರಾವಕ ಘಟನೆ ತಮಿಳುನಾಡಿನ ರೋಯಪೆಟ್ಟಾದಲ್ಲಿ ನಡೆದಿದೆ.
ಏನಿದು ಘಟನೆ:
ತಮಿಳುನಾಡಿನ ರೋಯಪೆಟ್ಟಾದಲ್ಲಿರುವ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಇ ಶಂಕರ್ ಹಾಗೂ ಮೂವರು ಮಕ್ಕಳ ನಡುವೆ ಜಗಳ ಆರಂಭವಾಗಿತ್ತು. ಅದಕ್ಕೆ ಕಾರಣವಾಗಿದ್ದು, ಒಬ್ಬ ಮಗನಿಗೆ ಮನೆಯಲ್ಲಿ ಇರಲು ಅವಕಾಶ ಕೊಡುವುದಿಲ್ಲ ಎಂಬುದು!
ಶಂಕರ್ ಗೆ ರಾಮಚಂದ್ರನ್(29ವರ್ಷ), ರಾಮಕೃಷ್ಣನ್(28ವರ್ಷ) ಹಾಗೂ ವಿಜಯ್(26ವರ್ಷ) ಸೇರಿ ಮೂವರು ಗಂಡು ಮಕ್ಕಳು. ಶುಕ್ರವಾರ ತಂದೆ ಶಂಕರ್ ಮತ್ತು ಮಗ ರಾಮಕೃಷ್ಣನ ನಡುವೆ ಜಗಳವಾಗಿತ್ತು. ಕುಡಿತದ ಅಭ್ಯಾಸ ಹೊಂದಿರುವ ನಿನಗೆ ನನ್ನ ಮನೆಯೊಳಗೆ ಪ್ರವೇಶ ಇಲ್ಲ ಎಂದು ತಂದೆ ಹೇಳಿದ್ದೇ ಜಗಳಕ್ಕೆ ಕಾರಣವಾಗಿತ್ತು.
ಗಲಾಟೆ ಕೇಳಿ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಝಾಮ್ ಬಜಾರ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಶಂಕರ್ ಹಾಗೂ ರಾಮಕೃಷ್ಣನ್ ನನ್ನು ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿ, ಬುದ್ದಿವಾದ ಹೇಳಿ ಶುಕ್ರವಾರ ರಾತ್ರಿ ವಾಪಸ್ ಕಳುಹಿಸಿದ್ದರು.
ರಾತ್ರಿ ಶಂಕರ್ ಅವರ ಕಿರಿಯ ಮಗ ವಿಜಯ್ ಮನೆಯ ಮೊದಲ ಮಹಡಿಯಲ್ಲಿ ಮಲಗಿದ್ದರೆ, ತಂದೆ ಶಂಕರ್ ಕೆಳ ಅಂತಸ್ತಿನಲ್ಲಿ ಮಲಗಿದ್ದರೆ, ರಾಮಕೃಷ್ಣನ್ ಮನೆಯ ಹೊರಗೆ ಮಲಗಿದ್ದ. ಸುಮಾರು 1.30ರ ಮುಂಜಾನೆ ಹೊತ್ತಿಗೆ ತಂದೆ ಕೂಗಿಕೊಳ್ಳುತ್ತಿರುವ ಶಬ್ದ ಕೇಳಿ ವಿಜಯ್ ಕೆಳಗೆ ಓಡಿ ಬಂದಿದ್ದ. ಆಗ ಬೆಂಕಿಯಲ್ಲಿ ತಂದೆ ಸುಟ್ಟು ಕರಕಲಾಗಿದ್ದರು ಎಂದು ವರದಿ ತಿಳಿಸಿದೆ. ಶೇ.95ರಷ್ಟು ಸುಟ್ಟು ಹೋಗಿದ್ದ ತಂದೆಯನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಸ್ಪಂದಿಸದೆ ಸಾವಿಗೀಡಾಗಿದ್ದರು.
2ನೇ ಪುತ್ರ ರಾಮಕೃಷ್ಣನ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ. ತಾನೇ ಪೆಟ್ರೋಲ್ ಖರೀದಿಸಿ ತಂದು ಕಿಟಕಿ ಮೂಲಕ ತಂದೆ ಮೈಮೇಲೆ ಸುರಿದು ಬೆಂಕಿ ಹಚ್ಚಿರುವುದಾಗಿ ತಪ್ಪೊಪ್ಪಿಕೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಮೃತ್ಯು
MUST WATCH
ಹೊಸ ಸೇರ್ಪಡೆ
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ