1992ರ ಅಯೋಧ್ಯೆ ಕಹಿ ಅನುಭವ: ರಕ್ಷಣೆ ಕೋರಿದ ಇಕ್ಬಾಲ್‌ ಅನ್ಸಾರಿ


Team Udayavani, Nov 15, 2018, 11:48 AM IST

iqbal-ansari-ayodhya-600.jpg

ಲಕ್ನೋ : ಅಯೋಧ್ಯೆಯ ರಾಮ ಜನ್ಮಭೂಮಿ ಭೂವಿವಾದದ ಕೇಸಿನಲ್ಲಿ ಓರ್ವ ಕಕ್ಷಿದಾರನಾಗಿರುವ ಇಕ್ಬಾಲ್‌ ಅನ್ಸಾರಿ ಅವರು ಇದೇ ನ.25ರಂದು ವಿವಿಧ ರಾಜಕೀಯ ಸಮೂಹಗಳು ಮತ್ತು ಬಲಪಂಥೀಯ ಸಂಘಟನೆಗಳ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಅಯೋಧ್ಯೆಗೆ ಹರಿದು ಬರಲಿರುವ ಕಾರಣ ಅಯೋಧ್ಯೆಯಲ್ಲಿನ ಮುಸ್ಲಿಮರಿಗೆ ಮತ್ತು ಹಿಂದುಗಳಿಗೆ ರಕ್ಷಣೆ ನೀಡಬೇಕು ಎಂದು ಸರಕಾರವನ್ನು ಆಗ್ರಹಿಸಿದ್ದಾರೆ.

ಅಯೋಧ್ಯೆಯಲ್ಲಿನ ನ.25ರ ಸಂಭವನೀಯ ಸ್ಥಿತಿಯನ್ನು ಅನ್ಸಾರಿ ಅವರು 1992ರಲ್ಲಿ ಉದ್ಭವಿಸಿದ್ದ ಸ್ಥಿತಿಯನ್ನು ನೆನೆದುಕೊಂಡು ಗರಿಷ್ಠ ರಕ್ಷಣೆಯನ್ನು ಆಗ್ರಹಿಸಿದ್ದಾರೆ.

“1992ರಲ್ಲಿ ನಾವು ವಿವಾದಿತ ಸ್ಥಳಕ್ಕೆ ಹೋಗೇ ಇರಲಿಲ್ಲ; ಆದಾಗ್ಯೂ ನಮ್ಮ ಮನೆಗಳನ್ನು ಸುಟ್ಟು ಹಾಕಲಾಯಿತು. 1992ರಂತೆ ಈ ನ.25ರಂದು ಅಯೋಧ್ಯೆಗೆ ಅದೇ ಪ್ರಮಾಣದಲ್ಲಿ ಹೊರಗಿನವರು ಹರಿದು ಬಂದಲ್ಲಿ ಸರಕಾರ ಇಲ್ಲಿನ ಮುಸ್ಲಿಮರು ಮತ್ತು ಹಿಂದುಗಳಿಗೆ ರಕ್ಷಣೆ ಕೊಡಲೇಬೇಕು’ ಎಂದು ಇಕ್ಬಾಲ್‌ ಅನ್ಸಾರಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು. 

“ನನ್ನ ಭದ್ರತೆಗೆ ಇಬ್ಬರು ಭದ್ರತಾ ಸಿಬಂದಿಗಳನ್ನು ಕೊಡಲಾಗಿದೆ. ಆದರೆ ನನ್ನನ್ನು ಕಾಣಲು ಅನೇಕರು ಬರುತ್ತಿದ್ದಾರೆ. ಮೇಲಾಗಿ ನ.25ರಂದು ಇಲ್ಲಿಗೆ ದೊಡ್ಡ ಸಂಖ್ಯೆಯಲ್ಲಿ ಜನರು ಬರುವ ಸಾಧ್ಯತೆ ಇದೆ. ಒಂದು ವೇಳೆ ನನ್ನ ಭದ್ರತೆಯನ್ನು ಮೇಲ್ಮಟ್ಟಕ್ಕೆ ಏರಿಸದೇ ಹೋದಲ್ಲಿ ನಾನು ನ.25ಕ್ಕೆ ಮೊದಲೇ ಇಲ್ಲಿಂದ ಬೇರೆ ಕಡೆಗೆ ಹೋಗುತ್ತೇನೆ’ ಎಂದು ಅನ್ಸಾರಿ ಹೇಳಿದರು. 

ನ.25ರಂದು ತಾವು ಆಯೋಧ್ಯೆಗೆ ಹೋಗುವುದಾಗಿ ಈಗಾಗಲೇ ಆರ್‌ಎಸ್‌ಎಸ್‌, ಶಿವ ಸೇನೆ, ವಿಶ್ವ ಹಿಂದೂ ಪರಿಷತ್‌ ಮತ್ತು ಇತರರು ಈಗಾಗಲೇ ಘೋಷಿಸಿರುವುದು ಗಮನಾರ್ಹವಾಗಿದೆ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವನ್ನು ಒತ್ತಾಯಿಸಿ ಹೂಂಕಾರ ರಾಲಿಗಾಗಿ ಆರ್‌ಎಸ್‌ಎಸ್‌ ಕರೆ ನೀಡಿದೆ. ಈ ರಾಲಿಯಲ್ಲಿ ಆರ್‌ಎಸ್‌ಎಸ್‌ನ ಉನ್ನತ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.  

ಇದೇ ರೀತಿ ನ.25ರಂದು ತಾವು ಅಯೋಧ್ಯೆಗೆ ಹೋಗುವುದಾಗಿ ಶಿವಸೇನೆಯ ಮುಖ್ಯಸ್ಥ ಉದ್ಧವ ಠಾಕ್ರೆ ಮತ್ತು ಇತರ ಸದಸ್ಯರು ಘೋಷಿಸಿದ್ದಾರೆ. ಆದರೆ ಶಿವಸೇನೆಯವರು ತಾವು ರಾಮ ಲಲ್ಲಾಗೆ ಪೂಜೆ ಸಲ್ಲಿಸುವ ಉದ್ದೇಶದಿಂದ ಮಾತ್ರವೇ ಅಯೋಧ್ಯೆಗೆ ಹೋಗುತ್ತಿರುವುದಾಗಿ ಹೇಳಿದ್ದಾರೆ. 

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

RBI

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

K-Kavitha

ED; ದಿಲ್ಲಿ ಲಿಕ್ಕರ್‌ ಕೇಸ್‌ ಡೀಲ್‌ಗೆ ಕೆಸಿಆರ್‌ ಪುತ್ರಿ ಕವಿತಾ ಸಂಚು

supreem

Himachal Pradesh; 6 ಕೈ ಶಾಸಕರ ಅನರ್ಹತೆ ಆದೇಶಕ್ಕೆ ತಡೆ ಇಲ್ಲ: ಸುಪ್ರೀಂ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.