1992ರ ಅಯೋಧ್ಯೆ ಕಹಿ ಅನುಭವ: ರಕ್ಷಣೆ ಕೋರಿದ ಇಕ್ಬಾಲ್ ಅನ್ಸಾರಿ
Team Udayavani, Nov 15, 2018, 11:48 AM IST
ಲಕ್ನೋ : ಅಯೋಧ್ಯೆಯ ರಾಮ ಜನ್ಮಭೂಮಿ ಭೂವಿವಾದದ ಕೇಸಿನಲ್ಲಿ ಓರ್ವ ಕಕ್ಷಿದಾರನಾಗಿರುವ ಇಕ್ಬಾಲ್ ಅನ್ಸಾರಿ ಅವರು ಇದೇ ನ.25ರಂದು ವಿವಿಧ ರಾಜಕೀಯ ಸಮೂಹಗಳು ಮತ್ತು ಬಲಪಂಥೀಯ ಸಂಘಟನೆಗಳ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಅಯೋಧ್ಯೆಗೆ ಹರಿದು ಬರಲಿರುವ ಕಾರಣ ಅಯೋಧ್ಯೆಯಲ್ಲಿನ ಮುಸ್ಲಿಮರಿಗೆ ಮತ್ತು ಹಿಂದುಗಳಿಗೆ ರಕ್ಷಣೆ ನೀಡಬೇಕು ಎಂದು ಸರಕಾರವನ್ನು ಆಗ್ರಹಿಸಿದ್ದಾರೆ.
ಅಯೋಧ್ಯೆಯಲ್ಲಿನ ನ.25ರ ಸಂಭವನೀಯ ಸ್ಥಿತಿಯನ್ನು ಅನ್ಸಾರಿ ಅವರು 1992ರಲ್ಲಿ ಉದ್ಭವಿಸಿದ್ದ ಸ್ಥಿತಿಯನ್ನು ನೆನೆದುಕೊಂಡು ಗರಿಷ್ಠ ರಕ್ಷಣೆಯನ್ನು ಆಗ್ರಹಿಸಿದ್ದಾರೆ.
“1992ರಲ್ಲಿ ನಾವು ವಿವಾದಿತ ಸ್ಥಳಕ್ಕೆ ಹೋಗೇ ಇರಲಿಲ್ಲ; ಆದಾಗ್ಯೂ ನಮ್ಮ ಮನೆಗಳನ್ನು ಸುಟ್ಟು ಹಾಕಲಾಯಿತು. 1992ರಂತೆ ಈ ನ.25ರಂದು ಅಯೋಧ್ಯೆಗೆ ಅದೇ ಪ್ರಮಾಣದಲ್ಲಿ ಹೊರಗಿನವರು ಹರಿದು ಬಂದಲ್ಲಿ ಸರಕಾರ ಇಲ್ಲಿನ ಮುಸ್ಲಿಮರು ಮತ್ತು ಹಿಂದುಗಳಿಗೆ ರಕ್ಷಣೆ ಕೊಡಲೇಬೇಕು’ ಎಂದು ಇಕ್ಬಾಲ್ ಅನ್ಸಾರಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
“ನನ್ನ ಭದ್ರತೆಗೆ ಇಬ್ಬರು ಭದ್ರತಾ ಸಿಬಂದಿಗಳನ್ನು ಕೊಡಲಾಗಿದೆ. ಆದರೆ ನನ್ನನ್ನು ಕಾಣಲು ಅನೇಕರು ಬರುತ್ತಿದ್ದಾರೆ. ಮೇಲಾಗಿ ನ.25ರಂದು ಇಲ್ಲಿಗೆ ದೊಡ್ಡ ಸಂಖ್ಯೆಯಲ್ಲಿ ಜನರು ಬರುವ ಸಾಧ್ಯತೆ ಇದೆ. ಒಂದು ವೇಳೆ ನನ್ನ ಭದ್ರತೆಯನ್ನು ಮೇಲ್ಮಟ್ಟಕ್ಕೆ ಏರಿಸದೇ ಹೋದಲ್ಲಿ ನಾನು ನ.25ಕ್ಕೆ ಮೊದಲೇ ಇಲ್ಲಿಂದ ಬೇರೆ ಕಡೆಗೆ ಹೋಗುತ್ತೇನೆ’ ಎಂದು ಅನ್ಸಾರಿ ಹೇಳಿದರು.
ನ.25ರಂದು ತಾವು ಆಯೋಧ್ಯೆಗೆ ಹೋಗುವುದಾಗಿ ಈಗಾಗಲೇ ಆರ್ಎಸ್ಎಸ್, ಶಿವ ಸೇನೆ, ವಿಶ್ವ ಹಿಂದೂ ಪರಿಷತ್ ಮತ್ತು ಇತರರು ಈಗಾಗಲೇ ಘೋಷಿಸಿರುವುದು ಗಮನಾರ್ಹವಾಗಿದೆ.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವನ್ನು ಒತ್ತಾಯಿಸಿ ಹೂಂಕಾರ ರಾಲಿಗಾಗಿ ಆರ್ಎಸ್ಎಸ್ ಕರೆ ನೀಡಿದೆ. ಈ ರಾಲಿಯಲ್ಲಿ ಆರ್ಎಸ್ಎಸ್ನ ಉನ್ನತ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಇದೇ ರೀತಿ ನ.25ರಂದು ತಾವು ಅಯೋಧ್ಯೆಗೆ ಹೋಗುವುದಾಗಿ ಶಿವಸೇನೆಯ ಮುಖ್ಯಸ್ಥ ಉದ್ಧವ ಠಾಕ್ರೆ ಮತ್ತು ಇತರ ಸದಸ್ಯರು ಘೋಷಿಸಿದ್ದಾರೆ. ಆದರೆ ಶಿವಸೇನೆಯವರು ತಾವು ರಾಮ ಲಲ್ಲಾಗೆ ಪೂಜೆ ಸಲ್ಲಿಸುವ ಉದ್ದೇಶದಿಂದ ಮಾತ್ರವೇ ಅಯೋಧ್ಯೆಗೆ ಹೋಗುತ್ತಿರುವುದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ