ಅಮೃತಸರ ರೈಲು ದುರಂತ ಮರೆತ ಜನ: ಹಳಿಯಲ್ಲೇ ನಿಂತು ಛಾತ್ ಪೂಜೆ
Team Udayavani, Nov 16, 2018, 11:46 AM IST
ಹೊಸದಿಲ್ಲಿ : ಕಳೆದ ತಿಂಗಳಲ್ಲಿ ಪಂಜಾಬಿನ ಅಮೃತಸರ ಸಮೀಪ ರೈಲು ಹಳಿಯಲ್ಲೇ ನಿಂತು ರಾವಣ ದಹನ ನೋಡುತ್ತಿದ್ದವರ ಪೈಕಿ ಕನಿಷ್ಠ 61 ಮಂದಿ ರೈಲಿನಡಿ ಬಿದ್ದು ಮೃತಪಟ್ಟ ಘಟನೆಯನ್ನು ಪೂರ್ತಿಯಾಗಿ ಮರತಂತಿರುವ ಜನರು, ಭಟಿಂಡಾ ಸಮೀಪ ರೈಲು ಹಳಿಯಲ್ಲೇ ಛಾತ್ ಪೂಜಾ ಆಚರಿಸಿದ್ದಾರೆ. ಕೇವಲ ತಿಂಗಳ ಹಿಂದಷ್ಟೇ ನಡೆದಿದ್ದ ಆ ದಾರುಣ ಘಟನೆಯನ್ನು ಇಷ್ಟು ಬೇಗನೆ ಜನರು ಮರೆತಿರುವುದು ಅಚ್ಚರಿಗೆ ಕಾರಣವಾಗಿದೆ.
ಈ ವಾರದ ಆರಂಭದಲ್ಲಿ ಭಟಿಂಡಾ ಸಮೀಪ ಸ್ಥಳೀಯರು ಛಾತ್ ಪೂಜಾ ಆಚರಿಸಲು ಅತ್ಯಂತ ದಟ್ಟನೆಯ ರೈಲು ಹಳಿಯನ್ನು ಕ್ರಾಸ್ ಮಾಡಿ ಛಾತ್ ಪೂಜೆಯಲ್ಲಿ ಪಾಲ್ಗೊಳ್ಳಲು ನುಗ್ಗಿರುವುದು ಕಂಡು ಬಂದಿದೆ. ಸ್ಥಳೀಯಾಡಳಿತೆಯವರು ಜನರಿಗೆ ರೈಲು ಹಳಿಯ ಮೇಲೆ ನಿಲ್ಲದಂತೆ ಎಷ್ಟೇ ಮನವಿ ಮಾಡಿಕೊಂಡರೂ ಅವರದನ್ನು ಒಂದಿಷ್ಟೂ ಲೆಕ್ಕಿಸಲಿಲ್ಲ.
ಛಾತ್ ಪೂಜೆಗಾಗಿ ನಿರ್ದಿಷ್ಟ ಲೆವೆಲ್ ಕ್ರಾಸಿಂಗ್ ಗಳನ್ನು ಮಾತ್ರವೇ ಬಳಸಬೇಕು ಎಂಬ ಸ್ಥಳೀಯಾಡಳಿತೆಯ ಸೂಚನೆಗಳನ್ನು ಜನರು ಸಂಪೂರ್ಣವಾಗಿ ನಿರ್ಲಕ್ಷಿಸಿದರು.
ಸಣ್ಣ ಸಣ್ಣ ಮಕ್ಕಳನ್ನು ಕೈಯಲ್ಲಿ ಹಿಡಿದುಕೊಂಡ ಮಹಿಳೆಯರು ಕೂಡ ಅಧಿಕಾರಿಗಳ ಎಚ್ಚರಿಕೆಗೆ ಕವಡೆ ಕಿಮ್ಮತ್ತು ಕೂಡ ನೀಡದೆ ರೈಲು ಹಳಿಯ ಮೇಲೆ ನಿಂತೇ ಛಾತ್ ಪೂಜೆಯಲ್ಲಿ ಭಾಗಿಯಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
MUST WATCH
ಹೊಸ ಸೇರ್ಪಡೆ
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!