ಶಬರಿಮಲೆ: ರೆಹನಾ ನಿರೀಕ್ಷಣಾ ಜಾಮಿನು ಅರ್ಜಿ ಹೈಕೋರ್ಟ್ನಿಂದ ವಜಾ
Team Udayavani, Nov 16, 2018, 4:11 PM IST
ಕೊಚ್ಚಿ : ಕೇರಳದ ಶಬರಿಮಲೆಯಲ್ಲಿನ ಪ್ರಸಿದ್ಧ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಎಲ್ಲ ವಯೋವರ್ಗದ ಮಹಿಳೆಯರು ಪ್ರವೇಶಿಸಬಹುದೆಂದು ಸುಪ್ರೀಂ ಕೋರ್ಟ್ ಕಳೆದ ಅಕ್ಟೋಬರ್ ನಲ್ಲಿ ಐತಿಹಾಸಿಕ ತೀರ್ಪು ನೀಡಿದುದನ್ನು ಅನುಸರಿಸಿ ದೇವಸ್ಥಾನ ಪ್ರವೇಶಕ್ಕೆ ಯತ್ನಿಸಿದ್ದ ಸಾಮಾಜಿಕ ಕಾರ್ಯಕರ್ತೆ ರೆಹಾನಾ ಫಾತಿಮಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್ ವಜಾ ಮಾಡಿದೆ.
ರೆಹಾನಾ ಫಾತಿಮಾ ಅವರ ಕೆಲವೊಂದು ಫೇಸ್ ಬುಕ್ ಪೋಸ್ಟ್ಗಳು ಧಾರ್ಮಿಕ ಮನೋಭಾವನೆಯನ್ನು ನೋಯಿಸುವಂತಿದೆ ಎಂದು ರಾಧಾಕೃಷ್ಣ ಮೆನನ್ ಎಂಬವರು ದಾಖಲಿಸಿದ ದೂರಿನ ಆಧಾರದಲ್ಲಿ ಪತ್ತನಂತಿಟ್ಟ ಪೊಲೀಸರು ಫಾತಿಮಾ ವಿರುದ್ಧ ಐಪಿಸಿ ಸೆ.295ಎ ಪ್ರಕಾರ ಕೇಸು ದಾಖಲಿಸಿಕೊಂಡಿದ್ದರು.
ತನ್ನನ್ನು ಪೊಲೀಸರು ಬಂಧಿಸಬಹುದೆಂಬ ಶಂಕೆಯಲ್ಲಿ ಫಾತಿಮಾ ಕೇರಳ ಹೈಕೋರ್ಟಿಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆಕೆಯ ಈ ಅರ್ಜಿಯನ್ನು ವಜಾ ಮಾಡಿದ ಕೇರಳ ಹೈಕೋರ್ಟ್, ಈ ಪ್ರಕರಣದಲ್ಲಿ ಪೊಲೀಸರು ಸೂಕ್ತ ಕ್ರಮ ತೆಗೆದುಕೊಳ್ಳಬಹುದಾಗಿದೆ ಎಂದು ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ