ನಿವೃತ್ತ HC ನ್ಯಾಯಾಧೀಶ ಆಸೀಮ್ ಕುಮಾರ್ ರಾಯ್ ಪ.ಬಂಗಾಲ ಲೋಕಾಯುಕ್ತ
Team Udayavani, Nov 16, 2018, 7:15 PM IST
ಕೋಲ್ಕತ : ಕಲ್ಕತ್ತ ಹೈಕೋರ್ಟಿನ ನಿವೃತ್ತ ನ್ಯಾಯಾಧೀಶ ಆಸೀಮ್ ಕುಮಾರ್ ರಾಯ್ ಅವರನ್ನು ಇಂದು ಶುಕ್ರವಾರ ಪಶ್ಚಿಮ ಬಂಗಾಲದ ಲೋಕಾಯುಕ್ತರನ್ನಾಗಿ ನೇಮಿಸಲಾಗಿದೆ.
ರಾಯ್ ಅವರು ಮೂರು ವರ್ಷಗಳ ಅವಧಿಗೆ ಲೋಕಾಯುಕ್ತ ಹುದ್ದೆಯನ್ನು ನಿರ್ವಹಿಸಲಿದ್ದಾರೆ. ಇವರು ರಾಜ್ಯದ ಎರಡನೇ ಲೋಕಾಯುಕ್ತರಾಗಿದ್ದಾರೆ. ಮೊದಲ ಲೋಕಾಯುಕ್ತ ಸಮರೀಶ್ ಬ್ಯಾನರ್ಜಿ 2006ರಿಂದ 2009ರ ವರೆಗಿನ ಅವಧಿಯಲ್ಲಿ ಕಾರ್ಯಭಾರ ನಿರ್ವಹಿಸಿದ್ದರು. ಅಲ್ಲಿಂದ ಈ ವರೆಗೂ ಲೋಕಾಯುಕ್ತ ಹುದ್ದೆ ಖಾಲಿ ಬಿದ್ದಿತ್ತು.
ಸ್ಪೀಕರ್ ಬಿಮಾನ್ ಬ್ಯಾನರ್ಜಿ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಉಪಸ್ಥಿತಿಯಲ್ಲಿ ಇಂದು ನಡೆದಿದ್ದ ಅಸೆಂಬ್ಲಿ ಸಭೆಯಲ್ಲಿ ರಾಯ್ ಅವರನ್ನು ಮುಂದಿನ ಲೋಕಾಯುಕ್ತರನ್ನಾಗಿ ನೇಮಿಸುವ ನಿರ್ಧಾರವನ್ನು ಕೈಗೊಳ್ಳಲಾಯಿತು.
ಪಶ್ಚಿಮ ಬಂಗಾಲ ವಿಧಾನಸಭೆಯು ಈ ವರ್ಷ ಜುಲೈಯಲ್ಲಿ 2018ರ ಲೋಕಾಯುಕ್ತ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿದ್ದು ಸಾರ್ವಜನಿಕ ಶಿಸ್ತಿಗೆ ಸಂಬಂಧಿಸಿದ ವಿಷಯಗಳಲ್ಲಿ ಮುಖ್ಯಮಂತ್ರಿಯನ್ನು ಲೋಕಾಯುಕ್ತ ವ್ಯಾಪ್ತಿಯಿಂದ ಹೊರಗಿಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
MUST WATCH
ಹೊಸ ಸೇರ್ಪಡೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ