ಪಾಕ್ ವಿರುದ್ಧದ 1971ರ ಲೋಂಗೇವಾಲಾ ಸಮರದ ಹೀರೋ ವಿಧಿವಶ
Team Udayavani, Nov 17, 2018, 5:12 PM IST
ಚಂಡೀಗಢ : 1971ರಲ್ಲಿ ಪಾಕಿಸ್ಥಾನದ ವಿರುದ್ಧ ನಡೆದಿದ್ದ ಲೋಂಗೇವಾಲಾ ಸಮರದಲ್ಲಿ ಎಂಟೆದೆಯ ಹೀರೋ ಆಗಿ ಮೂಡಿ ಬಂದಿದ್ದ ಬ್ರಿಗೇಡಿಯರ್ (ನಿವೃತ್ತ) ಕುಲದೀಪ್ ಸಿ,ಗ್ ಚಾಂದ್ಪುರಿ ಅವರು ತಮ್ಮ 78ರ ಹರೆಯದಲ್ಲಿ ಇಂದು ಶನಿವಾರ ನಿಧನ ಹೊಂದಿದರು.
ಕ್ಯಾನ್ಸರ್ ಪೀಡಿತರಾಗಿದ್ದ ಬ್ರಿಗೇಡಿಯರ್ ಚಾಂದ್ಪುರಿ ಅವರು ಇಂದು ನಸುಕಿನ ವೇಳೆ ನಗರದ ಆಸ್ಪತ್ರೆಯೊಂದರಲ್ಲಿ ನಿಧನ ಹೊಂದಿದರು. ಅವರು ಪತ್ನಿ ಮತ್ತು ಮೂವರು ಪುತ್ರರನ್ನು ಅಗಲಿದ್ದಾರೆ.
ಬ್ರಿಗೇಡಿಯರ್ ಚಾಂದ್ಪುರಿ ಅವರು 1962ರಲ್ಲಿ ಭಾರತೀಯ ಸೇನೆಯನ್ನು ಸೇರಿಕೊಂಡಿದ್ದರು. ಅವರನ್ನು ಪಂಜಾಬ್ ರೆಜಿಮೆಂಟ್ನ 23ನೇ ಬೆಟಾಲಿಯನ್ಗೆ ನಿಯೋಜಿಸಲಾಗಿತ್ತು. ವಿಶ್ವಸಂಸ್ಥೆಯ ಹಲವಾರು ಶಾಂತಿ ಪಡೆ ಅಭಿಯಾನದಲ್ಲಿ ದುಡಿದಿದ್ದ ಅವರು 1971ರಲ್ಲಿ ನಡೆದಿದ್ದ ಪಾಕ್ ವಿರುದ್ಧದ ಸಮರದಲ್ಲಿ ಲೋಂಗೇವಾಲಾ ಠಾಣೆಯನ್ನು ಎಂಟೆದೆಯ ಸಾಹಸದ ಹೋರಾಟದಲ್ಲಿ ಬೃಹತ್ ಸಂಖ್ಯೆಯಲ್ಲಿದ್ದ ಶತ್ರುಗಳ ವಶವಾಗದಂತೆ ಯಶಸ್ವಿಯಾಗಿ ರಕ್ಷಿಸಿದ್ದರು.
ಇವರ ಅಪ್ರತಿಮ ಹೋರಾಟದ ಕಥೆಯನ್ನು ಆಧರಿಸಿ “ಬಾರ್ಡರ್’ ಹಿಂದಿ ಸಿನೇಮಾ ಮಾಡಲಾಗಿತ್ತು. ಅದರಲ್ಲಿ ಸನ್ನಿ ದೇವಲ್ ಅವರು ಬ್ರಿಗೇಡಿಯರ್ ಚಾಂದ್ಪುರಿ ಪಾತ್ರವನ್ನು ನಿರ್ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್