ಮಮತಾ ಆಕ್ಷೇಪ: ನ.22ರ ಘಟಬಂಧನ್ ಸಭೆ ಮುಂದಕ್ಕೆ
Team Udayavani, Nov 20, 2018, 9:03 AM IST
ಕೋಲ್ಕತಾ: “ಮಹಾಘಟಬಂಧನ್’ ಮೂಲಕ ಬಿಜೆಪಿ ನೇತೃತ್ವದ ಎನ್ಡಿಎ ಎದುರಿಸಲು ರಚನೆ ಮಾಡುವ ಪ್ರತಿಪಕ್ಷಗಳ ಒಕ್ಕೂಟದ ಸಭೆ ನಡೆಯುವಂತೆಯೇ ತೋರುತ್ತಿಲ್ಲ. ಈ ಹಿಂದೆ ನಿಗದಿಯಾಗಿದ್ದಂತೆ ನ.22ರ ಸಭೆ ಮುಂದೂಡಿಕೆಯಾಗಿದೆ. ಕೋಲ್ಕತಾದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾದ ಬಳಿಕ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಈ ಮಾಹಿತಿ ನೀಡಿ ದ್ದಾರೆ. ಹೊಸ ದಿನಾಂಕವನ್ನು ಇನ್ನಷ್ಟೇ ಗುರುತಿಸಬೇಕಾಗಿದೆ ಎಂದಿದ್ದಾರೆ. ಸಿಬಿಐ, ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ, ಆರ್ಬಿಐಗಳನ್ನು ಕೇಂದ್ರ ದುರುಪಯೋಗ ಮಾಡುತ್ತಿದೆ ಎಂದು ನಾಯ್ಡು ದೂರಿದ್ದಾರೆ. ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಆಕ್ಷೇಪದ ಹಿನ್ನೆಲೆಯಲ್ಲಿ ಈ ಬೆಳವಣಿಗೆಯಾಗಿದೆ.
ಮೂಲಗಳ ಪ್ರಕಾರ ಸಭೆ ಜನವರಿಯಲ್ಲಿ ನಡೆಯಲಿದೆ. ಈ ಬೆಳವಣಿಗೆಯಿಂದಾಗಿ 2019ರ ಲೋಕಸಭಾ ಚುನಾವಣೆಗೆ ಮಹಾಮೈತ್ರಿ ಮೂಲಕ ಬಿಜೆಪಿಯನ್ನು ಹೆಡೆಮುರಿ ಕಟ್ಟಬೇಕೆನ್ನುವ ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳ ಲೆಕ್ಕಾಚಾರ ಮತ್ತೆ ಬುಡಮೇಲಾದಂತಿದೆ. ಒಕ್ಕೂಟ ರಚಿಸುವ ನಿಟ್ಟಿನಲ್ಲಿ ನಾಯ್ಡು ಬೆಂಗಳೂರಿಗೂ ಬಂದು ಜೆಡಿಎಸ್ ನಾಯಕರಾಗಿರುವ ದೇವೇಗೌಡ, ಕುಮಾರಸ್ವಾಮಿ ಜತೆ ಚರ್ಚಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
MUST WATCH
ಹೊಸ ಸೇರ್ಪಡೆ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್