ಬಿಜೆಪಿಯ 2ನೇ ಹಂತದ ಹೋರಾಟ ಶುರು


Team Udayavani, Dec 4, 2018, 11:42 AM IST

sabarimala-temple-800.jpg

ತಿರುವನಂತಪುರ: ಶಬರಿಮಲೆ ದೇಗುಲ ವಿಚಾರದಲ್ಲಿ ಕೇರಳದಲ್ಲಿನ ಎಲ್‌.ಡಿ.ಎಫ್. ಸರಕಾರಜನರ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿರುವ ಬಿಜೆಪಿ, 2ನೇ ಹಂತದ ಹೋರಾಟವಾಗಿ ಕೇರಳ ವಿಧಾನಸಭೆ ಎದುರು ಸರಣಿ ಉಪವಾಸ ಮತ್ತು ಪ್ರತಿಭಟನೆಯನ್ನು ಆರಂಭಿಸಿದೆ. ಸೋಮವಾರ ಪಕ್ಷದ ನಾಯಕಿ ಸರೋಜ್‌ ಪಾಂಡೆ ಇದಕ್ಕೆ ಚಾಲನೆ ನೀಡಿದ್ದು, ಬಿಜೆಪಿ ನಾಯಕ ಎ.ಎನ್‌.ರಾಧಾಕೃಷ್ಣನ್‌ ನೇತೃತ್ವದಲ್ಲಿ ನಿರಶನ ಶುರುವಾಗಿದೆ. 14 ಜಿಲ್ಲೆಗಳ ನಾಯಕರು ಮತ್ತು ಕಾರ್ಯಕರ್ತರೂ ಇದರಲ್ಲಿ ಭಾಗಿಯಾಗಿದ್ದಾರೆ.

ತಿರುವನಂತಪುರದಲ್ಲಿ ನಿರಶನಕ್ಕೆ ಚಾಲನೆ ನೀಡಿ ಮಾತನಾಡಿದ ಬಿಜೆಪಿ ಸಂಸದೆ ಸರೋಜ್‌ ಪಾಂಡೆ, ಶಬರಿಮಲೆ ವಿಚಾರವನ್ನು ಸಂಸತ್‌ನಲ್ಲಿ ಪ್ರಸ್ತಾವಿಸುತ್ತೇವೆ. ಚರ್ಚೆಗೆ ದಾರಿ ಯಾವತ್ತೂ ಮುಕ್ತವಾಗಿರಬೇಕು ಎಂದಿದ್ದಾರೆ. ಕೇರಳ ಸರಕಾರ ಶಬರಿಮಲೆ ವಿಚಾರವನ್ನು ಸಮರ್ಥವಾಗಿ ನಿಭಾಯಿಸಲಿಲ್ಲ ಎಂದೂ ದೂರಿದ್ದಾರೆ.

ಕೇರಳ ಬಿಜೆಪಿ ಅಧ್ಯಕ್ಷ ಪಿ.ಎಸ್‌.ಶ್ರೀಧರನ್‌ ಪಿಳ್ಳೆ ಮಾತನಾಡಿ ‘ಕೇರಳದಲ್ಲೀಗ ಅರಣ್ಯ ನ್ಯಾಯ ಪಾಲನೆಯಾಗುತ್ತಿದೆ. ಸಿಪಿಎಂನ ಸಂವಿಧಾನ ಪರಮೋಚ್ಚವಾದದ್ದಲ್ಲ. ಸಾರ್ವಕಾಲಿಕವಾಗಿ ಒಪ್ಪಿಕೊಂಡ ಭಾರತದ ಸಂವಿಧಾನವೇ ಶ್ರೇಷ್ಠವಾದದ್ದು’ ಎಂದರು. ಕೇರಳ ವಿಧಾನಸಭೆಯಲ್ಲಿಯೂ ಶಬರಿ ಮಲೆ ವಿವಾದ ಕೋಲಾಹಲಕ್ಕೆ ಕಾರಣವಾಗಿದೆ. ವಿಪಕ್ಷ ನಾಯಕ ರಮೇಶ್‌ ಚೆನ್ನಿತ್ತಲ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ನಡುವೆ ವಾಗ್ವಾದ ನಡೆದಿದೆ. ಕಲಾಪ ಆರಂಭವಾಗುತ್ತಲೇ ಯುಡಿಎಫ್ನ ಮೂವರು ಶಾಸಕರು ಸದನದಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹ  ಆರಂಭಿಸಿದರು.

ಶಾ ನಾಯಕರೇ?: ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ಚೆನ್ನಿತ್ತಲ ವಿರುದ್ಧ ಹರಿಹಾಯ್ದು “ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಸೂಚನೆಯಂತೆ ಕಾಂಗ್ರೆಸ್‌ ನಾಯಕರು ವರ್ತಿಸುತ್ತಿದ್ದಾರೆ. ಅವರ ನಾಯಕ ರಾಹುಲ್‌ ಗಾಂಧಿಯೋ, ಅಮಿತ್‌ ಶಾ ಅವರೋ? ವಿಧಾನ ಸಭೆಯ ಹೊರಗೆ ಬಿಜೆಪಿ ನಾಯಕರು ಸತ್ಯಾಗ್ರಹ ನಡೆಸುವ ಘೋಷಣೆ ಮಾಡಿದಾಗಲೇ ಪ್ರತಿಪಕ್ಷ ಯುಡಿಎಫ್ ಶಾಸಕರು ಸದನದಲ್ಲಿ ನಿರಶನ ಘೋಷಿಸುತ್ತಾರೆ ಎಂದು ತಾವು ತಿಳಿದದ್ದು ಸರಿ ಎಂದಿದ್ದಾರೆ ಸಿಎಂ ಪಿಣರಾಯಿ. ಈ ಮಾತುಗಳಿಗೆ ವಿಪಕ್ಷ ಸದಸ್ಯರು ಕ್ರುದ್ಧಗೊಂಡು ಧರಣಿ ನಡೆಸಿ, ಬಳಿಕ ಸಭಾತ್ಯಾಗ ಮಾಡಿದರು.

ಬಂಗಾಲ ಕೊಲ್ಲಿಗೆ ಎಸೆಯುತ್ತೇವೆ: ಪ್ರಹ್ಲಾದ ಜೋಶಿ
ಧಾರವಾಡ ಕ್ಷೇತ್ರದ ಸಂಸದ ಪ್ರಹ್ಲಾದ್‌ ಜೋಶಿ, ಕೇರಳದಲ್ಲಿನ ಎಲ್‌ಡಿಎಫ್ ಸರಕಾರ‌ದಿಂದ ಶಬರಿಮಲೆಯ ಸಂಪ್ರದಾಯ ನಾಶವಾಗುತ್ತಿದೆ. ರಾಜ್ಯದ ಪರಿಸ್ಥಿತಿ ಅಧ್ಯಯನ ಮಾಡಿ, ಪಕ್ಷದ ಅಧ್ಯಕ್ಷ ಅಮಿತ್‌ ಶಾಗೆ ವರದಿ ಸಲ್ಲಿಸಲಿದ್ದೇವೆ ಎಂದಿದ್ದಾರೆ. ಬ್ರಿಟಿಷರ ಅವಧಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತೇ ಹೊರತು, ವಿವಿಧ ನಂಬಿಕೆಗಳನ್ನು ಹೊಂದಿದ ಭಕ್ತರ ವಿರುದ್ಧವಲ್ಲ ಎಂದಿದ್ದಾರೆ. ಜತೆಗೆ ಕೇಂದ್ರ ಸಚಿವ ಪೊನ್‌ ರಾಧಾಕೃಷ್ಣನ್‌ ಜತೆಗೆ ಐಪಿಎಸ್‌ ಅಧಿಕಾರಿ ಯತೀಶ್‌ ಚಂದ್ರ ಅನುಚಿತವಾಗಿ ವರ್ತಿಸಿದ್ದು ಖಂಡನೀಯ. ಅವರ ವಿರುದ್ಧ ಸಂಸತ್‌ನಲ್ಲಿ ಹಕ್ಕುಚ್ಯುತಿ ಮಂಡಿಸಲು ಸಚಿವರಿಗೆ ಮನವಿ ಮಾಡುವುದಾಗಿಯೂ ಹೇಳಿದ್ದಾರೆ. ಕೇರಳ ರಾಜ್ಯ ಸರಕಾರಇದೇ ರೀತಿಯ ಧೋರಣೆ ಅನುಸರಿಸುತ್ತಿದ್ದರೆ, ಅದನ್ನು ಕಿತ್ತು ಬಂಗಾಲ ಕೊಲ್ಲಿಗೆ ಎಸೆಯುತ್ತೇವೆ ಎಂದೂ ಜೋಶಿ ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.