ಕೇಜ್ರಿವಾಲ್ ಮೇಲೆ ಖಾರದ ಪುಡಿ ದಾಳಿ
Team Udayavani, Nov 21, 2018, 4:05 AM IST
ಹೊಸದಿಲ್ಲಿ: ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ಖಾರದ ಪುಡಿ ದಾಳಿ ನಡೆದಿದ್ದು, ಸ್ವಲ್ಪದರಲ್ಲಿ ಪಾರಾಗಿದ್ದಾರೆ. ಸಿಎಂ ಕಚೇರಿಯ ದ್ವಾರದಲ್ಲೇ ಈ ಘಟನೆ ನಡೆದಿದೆ. ಖಾರದಪುಡಿ ಎರಚುವ ಪ್ರಯತ್ನ ನಡೆಸಿದ ಅನಿಲ್ ಕುಮಾರ್ ಶರ್ಮಾನನ್ನು ಪೊಲೀಸರು ಬಂಧಿಸಿದ್ದಾರೆ.
ಸಿಎಂಗೆ ಮನವಿ ಪತ್ರ ನೀಡುವ ನಾಟಕವಾಡಿದ ಅನಿಲ್, ಅನಂತರ ಕಾಲಿಗೆ ಬೀಳಲು ಹೋಗಿದ್ದ. ಕೇಜ್ರಿವಾಲ್ ಬೇಡ ಎನ್ನುವಂತೆ ಪಕ್ಕಕ್ಕೆ ಸರಿಯುತ್ತಿರುವಾಗಲೇ ತಂಬಾಕಿನ ಪ್ಯಾಕೆಟ್ ಒಂದರಲ್ಲಿ ಅಡಗಿಸಿ ತಂದಿದ್ದ ಖಾರದ ಪುಡಿಯನ್ನು ಅವರ ಮುಖಕ್ಕೆ ಎರಚಿದ್ದಾನೆ. ಸಿಎಂ ಕನ್ನಡಕ ಧರಿಸಿದ್ದರಿಂದ ಅವರಿಗೆ ಖಾರ ತಾಗಿಲ್ಲ. ಆದರೆ ಕನ್ನಡಕ ಕೆಳಕ್ಕೆ ಬಿದ್ದು ಒಡೆದಿದೆ. ಪೊಲೀಸರು ಅನಿಲ್ನನ್ನು ವಶಕ್ಕೆ ಪಡೆದಿದ್ದಾರೆ.
ಘಟನೆಯನ್ನು ಖಂಡಿಸಿರುವ ಆಮ್ ಆದ್ಮಿ ಪಾರ್ಟಿ, ಕೃತ್ಯದ ಹಿಂದೆ ಬಿಜೆಪಿ ಇದೆ ಎಂದು ಆರೋಪಿಸಿದೆ. ಆದರೆ ಇದನ್ನು ನಿರಾಕರಿಸಿರುವ ಬಿಜೆಪಿ, ಕೃತ್ಯವನ್ನು ಖಂಡಿಸಿದ್ದು ಉನ್ನತ ತನಿಖೆಗೆ ಆಗ್ರಹಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ