ಬಿಜೆಪಿಯ 2ನೇ ಹಂತದ ಹೋರಾಟ ಶುರು


Team Udayavani, Dec 4, 2018, 11:42 AM IST

sabarimala-temple-800.jpg

ತಿರುವನಂತಪುರ: ಶಬರಿಮಲೆ ದೇಗುಲ ವಿಚಾರದಲ್ಲಿ ಕೇರಳದಲ್ಲಿನ ಎಲ್‌.ಡಿ.ಎಫ್. ಸರಕಾರಜನರ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿರುವ ಬಿಜೆಪಿ, 2ನೇ ಹಂತದ ಹೋರಾಟವಾಗಿ ಕೇರಳ ವಿಧಾನಸಭೆ ಎದುರು ಸರಣಿ ಉಪವಾಸ ಮತ್ತು ಪ್ರತಿಭಟನೆಯನ್ನು ಆರಂಭಿಸಿದೆ. ಸೋಮವಾರ ಪಕ್ಷದ ನಾಯಕಿ ಸರೋಜ್‌ ಪಾಂಡೆ ಇದಕ್ಕೆ ಚಾಲನೆ ನೀಡಿದ್ದು, ಬಿಜೆಪಿ ನಾಯಕ ಎ.ಎನ್‌.ರಾಧಾಕೃಷ್ಣನ್‌ ನೇತೃತ್ವದಲ್ಲಿ ನಿರಶನ ಶುರುವಾಗಿದೆ. 14 ಜಿಲ್ಲೆಗಳ ನಾಯಕರು ಮತ್ತು ಕಾರ್ಯಕರ್ತರೂ ಇದರಲ್ಲಿ ಭಾಗಿಯಾಗಿದ್ದಾರೆ.

ತಿರುವನಂತಪುರದಲ್ಲಿ ನಿರಶನಕ್ಕೆ ಚಾಲನೆ ನೀಡಿ ಮಾತನಾಡಿದ ಬಿಜೆಪಿ ಸಂಸದೆ ಸರೋಜ್‌ ಪಾಂಡೆ, ಶಬರಿಮಲೆ ವಿಚಾರವನ್ನು ಸಂಸತ್‌ನಲ್ಲಿ ಪ್ರಸ್ತಾವಿಸುತ್ತೇವೆ. ಚರ್ಚೆಗೆ ದಾರಿ ಯಾವತ್ತೂ ಮುಕ್ತವಾಗಿರಬೇಕು ಎಂದಿದ್ದಾರೆ. ಕೇರಳ ಸರಕಾರ ಶಬರಿಮಲೆ ವಿಚಾರವನ್ನು ಸಮರ್ಥವಾಗಿ ನಿಭಾಯಿಸಲಿಲ್ಲ ಎಂದೂ ದೂರಿದ್ದಾರೆ.

ಕೇರಳ ಬಿಜೆಪಿ ಅಧ್ಯಕ್ಷ ಪಿ.ಎಸ್‌.ಶ್ರೀಧರನ್‌ ಪಿಳ್ಳೆ ಮಾತನಾಡಿ ‘ಕೇರಳದಲ್ಲೀಗ ಅರಣ್ಯ ನ್ಯಾಯ ಪಾಲನೆಯಾಗುತ್ತಿದೆ. ಸಿಪಿಎಂನ ಸಂವಿಧಾನ ಪರಮೋಚ್ಚವಾದದ್ದಲ್ಲ. ಸಾರ್ವಕಾಲಿಕವಾಗಿ ಒಪ್ಪಿಕೊಂಡ ಭಾರತದ ಸಂವಿಧಾನವೇ ಶ್ರೇಷ್ಠವಾದದ್ದು’ ಎಂದರು. ಕೇರಳ ವಿಧಾನಸಭೆಯಲ್ಲಿಯೂ ಶಬರಿ ಮಲೆ ವಿವಾದ ಕೋಲಾಹಲಕ್ಕೆ ಕಾರಣವಾಗಿದೆ. ವಿಪಕ್ಷ ನಾಯಕ ರಮೇಶ್‌ ಚೆನ್ನಿತ್ತಲ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ನಡುವೆ ವಾಗ್ವಾದ ನಡೆದಿದೆ. ಕಲಾಪ ಆರಂಭವಾಗುತ್ತಲೇ ಯುಡಿಎಫ್ನ ಮೂವರು ಶಾಸಕರು ಸದನದಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹ  ಆರಂಭಿಸಿದರು.

ಶಾ ನಾಯಕರೇ?: ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ಚೆನ್ನಿತ್ತಲ ವಿರುದ್ಧ ಹರಿಹಾಯ್ದು “ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಸೂಚನೆಯಂತೆ ಕಾಂಗ್ರೆಸ್‌ ನಾಯಕರು ವರ್ತಿಸುತ್ತಿದ್ದಾರೆ. ಅವರ ನಾಯಕ ರಾಹುಲ್‌ ಗಾಂಧಿಯೋ, ಅಮಿತ್‌ ಶಾ ಅವರೋ? ವಿಧಾನ ಸಭೆಯ ಹೊರಗೆ ಬಿಜೆಪಿ ನಾಯಕರು ಸತ್ಯಾಗ್ರಹ ನಡೆಸುವ ಘೋಷಣೆ ಮಾಡಿದಾಗಲೇ ಪ್ರತಿಪಕ್ಷ ಯುಡಿಎಫ್ ಶಾಸಕರು ಸದನದಲ್ಲಿ ನಿರಶನ ಘೋಷಿಸುತ್ತಾರೆ ಎಂದು ತಾವು ತಿಳಿದದ್ದು ಸರಿ ಎಂದಿದ್ದಾರೆ ಸಿಎಂ ಪಿಣರಾಯಿ. ಈ ಮಾತುಗಳಿಗೆ ವಿಪಕ್ಷ ಸದಸ್ಯರು ಕ್ರುದ್ಧಗೊಂಡು ಧರಣಿ ನಡೆಸಿ, ಬಳಿಕ ಸಭಾತ್ಯಾಗ ಮಾಡಿದರು.

ಬಂಗಾಲ ಕೊಲ್ಲಿಗೆ ಎಸೆಯುತ್ತೇವೆ: ಪ್ರಹ್ಲಾದ ಜೋಶಿ
ಧಾರವಾಡ ಕ್ಷೇತ್ರದ ಸಂಸದ ಪ್ರಹ್ಲಾದ್‌ ಜೋಶಿ, ಕೇರಳದಲ್ಲಿನ ಎಲ್‌ಡಿಎಫ್ ಸರಕಾರ‌ದಿಂದ ಶಬರಿಮಲೆಯ ಸಂಪ್ರದಾಯ ನಾಶವಾಗುತ್ತಿದೆ. ರಾಜ್ಯದ ಪರಿಸ್ಥಿತಿ ಅಧ್ಯಯನ ಮಾಡಿ, ಪಕ್ಷದ ಅಧ್ಯಕ್ಷ ಅಮಿತ್‌ ಶಾಗೆ ವರದಿ ಸಲ್ಲಿಸಲಿದ್ದೇವೆ ಎಂದಿದ್ದಾರೆ. ಬ್ರಿಟಿಷರ ಅವಧಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತೇ ಹೊರತು, ವಿವಿಧ ನಂಬಿಕೆಗಳನ್ನು ಹೊಂದಿದ ಭಕ್ತರ ವಿರುದ್ಧವಲ್ಲ ಎಂದಿದ್ದಾರೆ. ಜತೆಗೆ ಕೇಂದ್ರ ಸಚಿವ ಪೊನ್‌ ರಾಧಾಕೃಷ್ಣನ್‌ ಜತೆಗೆ ಐಪಿಎಸ್‌ ಅಧಿಕಾರಿ ಯತೀಶ್‌ ಚಂದ್ರ ಅನುಚಿತವಾಗಿ ವರ್ತಿಸಿದ್ದು ಖಂಡನೀಯ. ಅವರ ವಿರುದ್ಧ ಸಂಸತ್‌ನಲ್ಲಿ ಹಕ್ಕುಚ್ಯುತಿ ಮಂಡಿಸಲು ಸಚಿವರಿಗೆ ಮನವಿ ಮಾಡುವುದಾಗಿಯೂ ಹೇಳಿದ್ದಾರೆ. ಕೇರಳ ರಾಜ್ಯ ಸರಕಾರಇದೇ ರೀತಿಯ ಧೋರಣೆ ಅನುಸರಿಸುತ್ತಿದ್ದರೆ, ಅದನ್ನು ಕಿತ್ತು ಬಂಗಾಲ ಕೊಲ್ಲಿಗೆ ಎಸೆಯುತ್ತೇವೆ ಎಂದೂ ಜೋಶಿ ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

RBI

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

K-Kavitha

ED; ದಿಲ್ಲಿ ಲಿಕ್ಕರ್‌ ಕೇಸ್‌ ಡೀಲ್‌ಗೆ ಕೆಸಿಆರ್‌ ಪುತ್ರಿ ಕವಿತಾ ಸಂಚು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.