ತ.ನಾಡು, ಪುದುಚೇರಿಯಲ್ಲಿ ಭಾರೀ ಮಳೆ ಸಂಭವ: ಐಎಂಡಿ ಎಚ್ಚರಿಕೆ
Team Udayavani, Nov 22, 2018, 3:30 PM IST
ಚೆನ್ನೈ : ತಮಿಳುನಾಡು ಮತ್ತು ಪದುಚೇರಿಯ ಕೆಲವು ಪ್ರದೇಶಗಳಲ್ಲಿ ಭಾರಿ ಯಿಂದ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.
ಇದೇ ರೀತಿ ಕೇರಳ ಮತ್ತು ಆಂಧ್ರ ಪ್ರದೇಶದ ದಕ್ಷಿಣ ಕರಾವಳಿಯಲ್ಲಿ ಕೂಡ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಅದು ಹೇಳಿದೆ.
ಹವಾಮಾನ ಇಲಾಖೆಯ ಈ ಎಚ್ಚರಿಕೆಯನ್ನು ಅನುಸರಿಸಿ ಇಂದು ಗುರುವಾರವೇ ಚೆನ್ನೈ ನಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಚೆನ್ನೈ ಕಲೆಕ್ಟರ್ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.
ತಮಿಳು ನಾಡು ಕಳೆದ ನಾಲ್ಕು ವಾರಗಳಿಂದ ಅತ್ಯಂತ ಉಗ್ರ ಪ್ರತಾಪಿ ಗಜ ಚಂಡಮಾರುತದ ಪ್ರಹಾರಕ್ಕೆ ನಲುಗಿ ಹೋಗಿದೆ. ಇದರ ಪರಿಣಾಮವಾಗಿ 11 ಮಂದಿ ಮೃತಪಟ್ಟಿದ್ದಾರೆ.
ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಅವರು ಇಂದು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಗಜ ಚಂಡಮಾರುತದಿಂದ ಆಗಿರುವ ನಾಶ ನಷ್ಟದ ವಿವರಗಳನ್ನು ನೀಡಲಿದ್ದಾರೆ. ಅಂತೆಯೇ ಇದನ್ನು ಭರಿಸುವುದಕ್ಕೆ ಕೇಂದ್ರದಿಂದ ಪರ್ಯಾಪ್ತ ಪ್ರಮಾಣದ ನೆರವು ಪರಿಹಾರದ ಪ್ಯಾಕೇಜ್ ಕೋರಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ