ಲಷ್ಕರ್, ಹಿಜ್ಬುಲ್ನ ಆರು ಉಗ್ರರ ಹತ್ಯೆ
Team Udayavani, Nov 24, 2018, 6:00 AM IST
ಶ್ರೀನಗರ: ದಕ್ಷಿಣ ಕಾಶ್ಮೀರದ ಬಿಜ್ಬೇಹರ ಪ್ರಾಂತ್ಯದಲ್ಲಿ ಲಷ್ಕರ್ ಎ ತೊಯ್ಬಾ ಹಾಗೂ ಹಿಜ್ಬುಲ್ ಮುಜಾಹಿದೀನ್ ಸಂಘಟನೆಗಳಿಗೆ ಸೇರಿದ ಆರು ಉಗ್ರವಾದಿಗಳನ್ನು ಭದ್ರತಾ ಪಡೆಗಳು ಶುಕ್ರವಾರ ಹತ್ಯೆಗೈದಿವೆ. ಇವರನ್ನು ಆಜಾದ್ ಅಹ್ಮದ್ ಮಲಿಕ್, ಉನ್ನಾಯಿಸ್ ಶಫಿ, ಬಾಸಿತ್ ಇಶಿಯಾಖ್, ಆತಿಫ್ ನಜರ್, ಫಿರ್ದೋಸ್ ಅಹ್ಮದ್ ಹಾಗೂ ಶಾಹೀದ್ ಬಾಶಿರ್ ಎಂದು ಗುರುತಿಸಲಾಗಿದೆ.
ಇವರಲ್ಲೊಬ್ಬ ಪತ್ರಕರ್ತ ಶುಜಾತ್ ಬುಖಾರಿಯ ಹತ್ಯೆಯ ರೂವಾರಿಯೂ ಹೌದು. ಮೂವರು ಉಗ್ರರೂ ಭಯೋತ್ಪಾದನಾ ಸಂಘಟನೆಗಳ ಕಮಾಂಡರ್ಗಳೆಂದು ಪೊಲೀಸರು ತಿಳಿಸಿದ್ದಾರೆ. ವಗಾಹಮಾ ಸುಕ್ತಿಪೊರಾ ಬೆಟ್ಟದ ತಪ್ಪಲಿನ ಪ್ರದೇಶದಲ್ಲಿ ಭಯೋತ್ಪಾದಕ ಗುಂಪೊಂದು ಅಡಗಿರುವ ಬಗ್ಗೆ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಆ ಪ್ರಾಂತ್ಯದಲ್ಲಿ ಗುರುವಾರ ರಾತ್ರಿಯಿಂದಲೇ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿತ್ತು. ಶುಕ್ರವಾರ ಉಗ್ರರೊಂದಿಗೆ ಅವರ ಮುಖಾಮುಖಿಯಾಗಿ ಗುಂಡಿನ ಚಕಮಕಿ ನಡೆಯಿತು. ಹತ್ಯೆಗೀಡಾದ ಆರೂ ಉಗ್ರರು, ವಿವಿಧ ಭಯೋತ್ಪಾದನಾ ಕೃತ್ಯಗಳಲ್ಲಿ ಪೊಲೀಸರಿಗೆ ಬೇಕಾದವರಾಗಿದ್ದರು ಎಂದು ಜಮ್ಮು ಕಾಶ್ಮೀರದ ಡಿಜಿಪಿ (ಕಾಶ್ಮೀರ ವಲಯ) ಸ್ವಯಂ ಪ್ರಕಾಶ್ ಪಾಣಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ