ಸಿಬಿಐ ಅಧಿಕಾರಿಗಳದ್ದು ಬೆಕ್ಕಿನ ಜಗಳ: ಸುಪ್ರೀಂಗೆ ಕೇಂದ್ರ
Team Udayavani, Dec 6, 2018, 6:00 AM IST
ಹೊಸದಿಲ್ಲಿ: ಕೇಂದ್ರ ತನಿಖಾ ಸಂಸ್ಥೆ, ಸಿಬಿಐನ ಇಬ್ಬರು ಉನ್ನತ ಅಧಿಕಾರಿಗಳು ಬೆಕ್ಕಿನಂತೆ ಜಗಳವಾಡುತ್ತಿದ್ದರು. ಇದರಿಂದಾಗಿ ಕೇಂದ್ರ, ತನಿಖಾ ಸಂಸ್ಥೆ ನಗೆಪಾಟಲಿಗೀಡಾಗುವಂತಾಗಿತ್ತು. ಅದ್ದರಿಂದಲೇ ಮಧ್ಯಪ್ರವೇಶಿಸಬೇಕಾಯಿತು ಎಂದು ಸುಪ್ರೀಂಕೋರ್ಟ್ಗೆ ಸರ್ಕಾರ ಬುಧವಾರ ಅರಿಕೆ ಮಾಡಿಕೊಂಡಿದೆ. ಸಂಸ್ಥೆಯ ಗೌರವವನ್ನು ಕಾಪಾಡುವ ದೃಷ್ಟಿಯಿಂದ ಸಿಬಿಐ ಮುಖ್ಯಸ್ಥ ಅಲೋಕ್ ವರ್ಮಾರನ್ನು ಮತ್ತು ವಿಶೇಷ ಸನ್ನಿವೇಶಗಳಿಂದಾಗಿ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನರನ್ನು ರಜೆಯ ಮೇಲೆ ಕಳುಹಿಸಲಾಗಿದೆ. ಈ ನಿರ್ಧಾರವನ್ನು ಸಿವಿಸಿ ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಕೈಗೊಂಡಿದೆ. ತನ್ನನ್ನು ರಜೆಯ ಮೇಲೆ ಕಳುಹಿಸಿರುವುದನ್ನು ಪ್ರಶ್ನಿಸಿ ಅಲೋಕ್ ವರ್ಮಾ ಸಲ್ಲಿಸಿದ ದೂರಿನ ವಿಚಾರಣೆಯ ವೇಳೆ ಕೇಂದ್ರ ಈ ಸ್ಪಷ್ಟನೆ ನೀಡಿದೆ. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಕಾನೂನು ಉಲ್ಲಂಘನೆ ಮಾಡಿದೆ ಎಂದು ವರ್ಮಾ ಪರ ವಕೀಲ ಫಾಲಿ ನಾರಿಮನ್ ವಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ