ಬಾಬ್ರಿ ಮಸೀದಿ ಧ್ವಂಸವಾಗಿ 26 ವರ್ಷ;ಅಯೋಧ್ಯೆಯಲ್ಲಿ ವ್ಯಾಪಕ ಕಟ್ಟೆಚ್ಚರ
Team Udayavani, Dec 6, 2018, 10:27 AM IST
ಅಯೋಧ್ಯೆ: ಬಾಬ್ರಿ ಮಸೀದಿ ಧ್ವಂಸವಾಗಿ ಇಂದು ಗುರುವಾರ 26 ವರ್ಷ ಹಿನ್ನಲೆಯಲ್ಲಿ ಅಯೋಧ್ಯೆ ಮತ್ತು ಆಯಕಟ್ಟಿನ ಸ್ಥಳದಲ್ಲಿ ವ್ಯಾಪಕ ಭದ್ರತೆ ಏರ್ಪಡಿಸಲಾಗಿದೆ.
ಈಗಾಗಲೇ ರಾಮ ಮಂದಿರ ನಿರ್ಮಾಣಕ್ಕಾಗಿ ಕೂಗು ಜೋರಾಗಿದ್ದು, ಉತ್ತರ ಪ್ರದೇಶದಲ್ಲಿ ಕೋಮು ಸೂಕ್ಷ್ಮ ಸ್ಥಿತಿ ಇರುವ ಹಿನ್ನಲೆಯಲ್ಲಿ, ಬಿಗಿ ಭದ್ರತೆ ಏರ್ಪಡಿಸಿ ಅಹಿತರಕ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ.
ಅಯೋಧ್ಯೆಯಲ್ಲಿ 2,500 ಮಂದಿ ಪೊಲೀಸರೊಂದಿಗೆ ಆರ್ಎಎಫ್, ಸಿಆರ್ಪಿಎಫ್ ಪಡೆಗಳನ್ನು ನಿಯೋಜಿಸಲಾಗಿದೆ.ಫೈಜಾಬಾದ್ನಲ್ಲೂ ಭಾರೀ ಸಂಖ್ಯೆಯ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.
ಮುಸ್ಲಿಂ ಸಂಘಟನೆಗಳಿಂದ ಕರಾಳ ದಿನ ಮತ್ತು ಹಿಂದು ಪರ ಸಂಘಟನೆಗಳಿಂದ ಸಂಭ್ರಮಾಚರಣೆ ನಡೆಯುವ ಹಿನ್ನಲೆಯಲ್ಲಿ ಪೊಲೀಸರು ಅನುಮತಿ ಪಡೆದವರಿಗೆ ಮಾತ್ರ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಅವಕಾಶ ನೀಡಿದ್ದಾರೆ.
ನಗರದಲ್ಲಿ ಅಂಗಡಿ ಮುಂಗಟ್ಟುಗಳು ತೆರೆದಿದ್ದು, ಭಕ್ತರು ಎಂದಿನಂತೆ ದೇವಾಲಯಗಳಿಗೆ ತೆರಳುತ್ತಿದ್ದಾರೆ.
ವಾರದ ಹಿಂದೆ ವಿಎಚ್ಪಿ ಮತ್ತು ಶಿವಸೇನೆ ರಾಮಮಂದಿರಕ್ಕಾಗಿ ಪ್ರತ್ಯೇಕ ಧರ್ಮ ಸಭೆಗಳನ್ನು ನಡೆಸಿದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆದಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ