ಬಾಬ್ರಿ ಮಸೀದಿ ಧ್ವಂಸವಾಗಿ 26 ವರ್ಷ;ಅಯೋಧ್ಯೆಯಲ್ಲಿ ವ್ಯಾಪಕ ಕಟ್ಟೆಚ್ಚರ
Team Udayavani, Dec 6, 2018, 10:27 AM IST
ಅಯೋಧ್ಯೆ: ಬಾಬ್ರಿ ಮಸೀದಿ ಧ್ವಂಸವಾಗಿ ಇಂದು ಗುರುವಾರ 26 ವರ್ಷ ಹಿನ್ನಲೆಯಲ್ಲಿ ಅಯೋಧ್ಯೆ ಮತ್ತು ಆಯಕಟ್ಟಿನ ಸ್ಥಳದಲ್ಲಿ ವ್ಯಾಪಕ ಭದ್ರತೆ ಏರ್ಪಡಿಸಲಾಗಿದೆ.
ಈಗಾಗಲೇ ರಾಮ ಮಂದಿರ ನಿರ್ಮಾಣಕ್ಕಾಗಿ ಕೂಗು ಜೋರಾಗಿದ್ದು, ಉತ್ತರ ಪ್ರದೇಶದಲ್ಲಿ ಕೋಮು ಸೂಕ್ಷ್ಮ ಸ್ಥಿತಿ ಇರುವ ಹಿನ್ನಲೆಯಲ್ಲಿ, ಬಿಗಿ ಭದ್ರತೆ ಏರ್ಪಡಿಸಿ ಅಹಿತರಕ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ.
ಅಯೋಧ್ಯೆಯಲ್ಲಿ 2,500 ಮಂದಿ ಪೊಲೀಸರೊಂದಿಗೆ ಆರ್ಎಎಫ್, ಸಿಆರ್ಪಿಎಫ್ ಪಡೆಗಳನ್ನು ನಿಯೋಜಿಸಲಾಗಿದೆ.ಫೈಜಾಬಾದ್ನಲ್ಲೂ ಭಾರೀ ಸಂಖ್ಯೆಯ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.
ಮುಸ್ಲಿಂ ಸಂಘಟನೆಗಳಿಂದ ಕರಾಳ ದಿನ ಮತ್ತು ಹಿಂದು ಪರ ಸಂಘಟನೆಗಳಿಂದ ಸಂಭ್ರಮಾಚರಣೆ ನಡೆಯುವ ಹಿನ್ನಲೆಯಲ್ಲಿ ಪೊಲೀಸರು ಅನುಮತಿ ಪಡೆದವರಿಗೆ ಮಾತ್ರ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಅವಕಾಶ ನೀಡಿದ್ದಾರೆ.
ನಗರದಲ್ಲಿ ಅಂಗಡಿ ಮುಂಗಟ್ಟುಗಳು ತೆರೆದಿದ್ದು, ಭಕ್ತರು ಎಂದಿನಂತೆ ದೇವಾಲಯಗಳಿಗೆ ತೆರಳುತ್ತಿದ್ದಾರೆ.
ವಾರದ ಹಿಂದೆ ವಿಎಚ್ಪಿ ಮತ್ತು ಶಿವಸೇನೆ ರಾಮಮಂದಿರಕ್ಕಾಗಿ ಪ್ರತ್ಯೇಕ ಧರ್ಮ ಸಭೆಗಳನ್ನು ನಡೆಸಿದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆದಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ