ಬಾಬ್ರಿ ಮಸೀದಿ ಧ್ವಂಸವಾಗಿ 26 ವರ್ಷ;ಅಯೋಧ್ಯೆಯಲ್ಲಿ ವ್ಯಾಪಕ ಕಟ್ಟೆಚ್ಚರ
Team Udayavani, Dec 6, 2018, 10:27 AM IST
ಅಯೋಧ್ಯೆ: ಬಾಬ್ರಿ ಮಸೀದಿ ಧ್ವಂಸವಾಗಿ ಇಂದು ಗುರುವಾರ 26 ವರ್ಷ ಹಿನ್ನಲೆಯಲ್ಲಿ ಅಯೋಧ್ಯೆ ಮತ್ತು ಆಯಕಟ್ಟಿನ ಸ್ಥಳದಲ್ಲಿ ವ್ಯಾಪಕ ಭದ್ರತೆ ಏರ್ಪಡಿಸಲಾಗಿದೆ.
ಈಗಾಗಲೇ ರಾಮ ಮಂದಿರ ನಿರ್ಮಾಣಕ್ಕಾಗಿ ಕೂಗು ಜೋರಾಗಿದ್ದು, ಉತ್ತರ ಪ್ರದೇಶದಲ್ಲಿ ಕೋಮು ಸೂಕ್ಷ್ಮ ಸ್ಥಿತಿ ಇರುವ ಹಿನ್ನಲೆಯಲ್ಲಿ, ಬಿಗಿ ಭದ್ರತೆ ಏರ್ಪಡಿಸಿ ಅಹಿತರಕ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ.
ಅಯೋಧ್ಯೆಯಲ್ಲಿ 2,500 ಮಂದಿ ಪೊಲೀಸರೊಂದಿಗೆ ಆರ್ಎಎಫ್, ಸಿಆರ್ಪಿಎಫ್ ಪಡೆಗಳನ್ನು ನಿಯೋಜಿಸಲಾಗಿದೆ.ಫೈಜಾಬಾದ್ನಲ್ಲೂ ಭಾರೀ ಸಂಖ್ಯೆಯ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.
ಮುಸ್ಲಿಂ ಸಂಘಟನೆಗಳಿಂದ ಕರಾಳ ದಿನ ಮತ್ತು ಹಿಂದು ಪರ ಸಂಘಟನೆಗಳಿಂದ ಸಂಭ್ರಮಾಚರಣೆ ನಡೆಯುವ ಹಿನ್ನಲೆಯಲ್ಲಿ ಪೊಲೀಸರು ಅನುಮತಿ ಪಡೆದವರಿಗೆ ಮಾತ್ರ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಅವಕಾಶ ನೀಡಿದ್ದಾರೆ.
ನಗರದಲ್ಲಿ ಅಂಗಡಿ ಮುಂಗಟ್ಟುಗಳು ತೆರೆದಿದ್ದು, ಭಕ್ತರು ಎಂದಿನಂತೆ ದೇವಾಲಯಗಳಿಗೆ ತೆರಳುತ್ತಿದ್ದಾರೆ.
ವಾರದ ಹಿಂದೆ ವಿಎಚ್ಪಿ ಮತ್ತು ಶಿವಸೇನೆ ರಾಮಮಂದಿರಕ್ಕಾಗಿ ಪ್ರತ್ಯೇಕ ಧರ್ಮ ಸಭೆಗಳನ್ನು ನಡೆಸಿದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆದಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ