ಬಿಜೆಪಿ ಸಮಾಜ ಒಡೆಯುತ್ತಿದೆ: ದಲಿತ ಸಂಸದೆ ಫುಳೆ ಪಕ್ಷಕ್ಕೆ ರಾಜೀನಾಮೆ
Team Udayavani, Dec 6, 2018, 3:46 PM IST
ಲಕ್ನೋ : ವಿವಾದಾತ್ಮಕ ಹೇಳಿಕೆಗಳಿಗಾಗಿ ಚಿರಪರಿಚಿತರಾಗಿರುವ ಬಿಜೆಪಿ ದಲಿತ ಸಂಸದೆ ಸಾವಿತ್ರಿ ಬಾಯಿ ಫುಳೆ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
“ಭಾರತೀಯ ಜನತಾ ಪಕ್ಷ ಸಮಾಜವನ್ನು ಒಡೆಯಲು ಯತ್ನಿಸುತ್ತಿದೆ’ ಎಂದು ಫುಳೆ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.
“ನಾನಿವತ್ತು ಬಿಜೆಪಿಗೆ ರಾಜೀನಾಮೆ ನೀಡುತ್ತಿದ್ದೇನೆ. ದೇಶದ ಸಂವಿಧಾನವನ್ನು ಮುಗಿಸಿ ಬಿಡುವ ಮತ್ತು ದಲಿತರು ಮತ್ತು ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಕೊನೆಗೊಳಿಸುವ ಸಂಚು ಪಕ್ಷದಿಂದ ನಡೆಯುತ್ತಿದೆ’ ಎಂದು ಫುಳೆ ಆರೋಪಿಸಿದ್ದಾರೆ.
ಇದೇ ಡಿ.23ರಂದು ಲಕ್ನೋ ದ ರಮಾಬಾಯಿ ಅಂಬೇಡ್ಕರ್ ಮೈದಾನದಲ್ಲಿ ನಡೆಯಲಿರುವ ರಾಲಿಯಲ್ಲಿ ತಾನು ಬಾಂಬ್ ಹಾಕಲಿದ್ದೇನೆ ಎಂದು ಫುಳೆ ಹೇಳಿದ್ದಾರೆ.
ಬಹರೇಚ್ ಲೋಕಸಭಾ ಕ್ಷೇತ್ರದಿಂದ ಜಯಿಸಿ ಬಂದಿದ್ದ ಫುಳೆ ಅವರು ಈಚೆಗೆ, ದಲಿತರು ಮತ್ತು ಹಿಂದುಳಿದ ವರ್ಗದವರು ಮಂಗ ಮತ್ತು ರಾಕ್ಷಸರು; ಹನುಮಾನ್ ಓರ್ವ ದಲಿತ ಮತ್ತು ಮನುವಾದಿಗಳ ಗುಲಾಮ ಎಂಬ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್