ದೆಹಲಿಯಲ್ಲಿ VHP ರ್ಯಾಲಿ: ಕೇಂದ್ರದ ವಿರುದ್ಧವೇ RSS ನಾಯಕರ ಆಕ್ರೋಶ
Team Udayavani, Dec 9, 2018, 3:41 PM IST
ಹೊಸದಿಲ್ಲಿ: ವಿಶ್ವಹಿಂದು ಪರಿಷತ್ ನೇತೃತದಲ್ಲಿ ರಾಮ್ಲೀಲಾ ಮೈದಾನದಲ್ಲಿ ಭಾನುವಾರ ಬೃಹತ್ ರ್ಯಾಲಿ ನಡೆಸಿ ಆಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಸರ್ಕಾರವನ್ನು ಆಗ್ರಹಿಸಲಾಗಿದ್ದು, ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ವಿರುದ್ಧವೇ ಆರ್ಎಸ್ಎಸ್ ನಾಯಕರು ಪರೋಕ್ಷ ಆಕ್ರೋಶ ಹೊರ ಹಾಕಿದ್ದಾರೆ.
ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಆರ್ಎಸ್ಎಸ್ ಕಾರ್ಯ ನಿರ್ವಾಹಕರಾಗಿರುವ ಸುರೇಶ್ ಭಯ್ನಾಜಿ ಜೋಷಿ, ‘ಯಾರು ರಾಮ ಮಂದಿರ ನಿರ್ಮಾಣ ಮಾಡುವ ಭರವಸೆ ನೀಡಿ ಅಧಿಕಾರದಲ್ಲಿದ್ದಾರೋ ಅವರು ಜನರ ಭಾವನೆಗಳನ್ನು ಅರ್ಥ ಮಾಡಿಕೊಂಡು ಬೇಡಿಕೆ ಈಡೇರಿಸಬೇಕು’ ಎಂದಿದ್ದಾರೆ.
ಬಿಜೆಪಿ ಹೆಸರು ಹೇಳದೆ ಜೋಷಿ ಈ ಮಾತು ಹೇಳಿದ್ದು,’ನಾವು ಮಂದಿನ ನಿರ್ಮಾಣ ಮಾಡಬೇಕು ಎಂದು ಬೇಡುವುದಿಲ್ಲ. ನಾವು ನಮ್ಮ ಭಾವನೆಗಳನ್ನು ಹೊರಹಾಕುತ್ತಿದ್ದೇವೆ. ದೇಶಕ್ಕೆ ರಾಮ ಮಂದಿರದ ಅಗತ್ಯವಿದೆ’ ಎಂದಿದ್ದಾರೆ.
ರ್ಯಾಲಿಯಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದರು. ಚಳಿಗಾಲದ ಅಧಿವೇಶನಕ್ಕೂ ಮುನ್ನ ಕೇಂದ್ರ ಸರ್ಕಾರದ ಗಮನ ಸೆಳೆಯಲು ಈ ಸಮಾವೇಶ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ