ಅಧಿಕಾರದಲ್ಲಿರುವವರೇ ಮಂದಿರ ಮರೆತಿದ್ದಾರೆ!
Team Udayavani, Dec 10, 2018, 6:10 AM IST
ಹೊಸದಿಲ್ಲಿ: ‘ಈಗ ಅಧಿಕಾರದಲ್ಲಿ ಇರುವವರೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಾಗಿ ಆಶ್ವಾಸನೆ ನೀಡಿದ್ದರು. ಆದರೆ ಈಗ ಮರೆತಿದ್ದಾರೆ’ – ಹೀಗೆಂದು ಆರೆಸ್ಸೆಸ್ನ ಸರ ಕಾರ್ಯವಾಹ ಸುರೇಶ್ ಭಯ್ಯಾಜಿ ಜೋಶಿ ಪರೋಕ್ಷವಾಗಿ ಬಿಜೆಪಿ ವಿರುದ್ಧ ಗುಡುಗಿದ್ದಾರೆ. ಅಗತ್ಯ ಬಿದ್ದರೆ ಮಂದಿರ ನಿರ್ಮಾಣ ವಿಚಾರದಲ್ಲಿ ಸೂಕ್ತ ಕಾನೂನು ರಚಿಸಬೇಕು ಎಂದು ಒತ್ತಾಯಿಸಿದ್ದಾರೆ.
ದಿಲ್ಲಿಯ ರಾಮಲೀಲಾ ಮೈದಾನದಲ್ಲಿ ರವಿವಾರ ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಬೃಹತ್ ಜಾಥಾದಲ್ಲಿ ಮಾತನಾಡಿದ ಅವರು, ‘ಈಗ ಅಧಿಕಾರದಲ್ಲಿರುವವರು ರಾಮ ಮಂದಿರ ನಿರ್ಮಾಣದ ವಾಗ್ಧಾನ ಮಾಡಿದ್ದರು. ಅವರು ಜನರ ಅಭಿಪ್ರಾಯ ಕೇಳಬೇಕು ಮತ್ತು ಅವರ ಬೇಡಿಕೆ ಈಡೇರುವ ಬಗ್ಗೆ ಕ್ರಮ ಕೈಗೊಳ್ಳಬೇಕು. ಅಧಿಕಾರದಲ್ಲಿರುವವರಿಗೆ ಜನರ ಭಾವನೆಗಳ ಬಗ್ಗೆ ಗೊತ್ತಿದೆ. ದೇಶಕ್ಕೆ ರಾಮ ರಾಜ್ಯ ಬೇಕಾಗಿದೆ. ಹಾಗಂತ ನಾವು ಭಿಕ್ಷೆ ಬೇಡುತ್ತಿಲ್ಲ. ನಮ್ಮ ಭಾವನೆಗಳನ್ನು ವ್ಯಕ್ತಪಡಿಸುತ್ತಿದ್ದೇವೆ’ ಎಂದಿದ್ದಾರೆ.
1.5 ಲಕ್ಷ ಮಂದಿ ಭಾಗಿ
ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ 1.5 ಲಕ್ಷಕ್ಕೂ ಅಧಿಕ ಮಂದಿ ಸಾಧುಗಳು-ಸಂತರು, ಹಿಂದೂ ಸಂಘಟನೆಗಳ ಕಾರ್ಯಕರ್ತರು ಈ ಜಾಥಾದಲ್ಲಿ ಭಾಗವಹಿಸಿದ್ದಾರೆ. ಅಯೋಧ್ಯೆಯಲ್ಲಿನ ಜಮೀನು ಯಾರಿಗೆ ಸೇರಬೇಕು ಎಂಬ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್ನಲ್ಲಿದ್ದು, ಜನವರಿಯಿಂದ ವಿಚಾರಣೆ ಆರಂಭವಾಗಲಿದೆ. ವಿಎಚ್ಪಿ ಅಧ್ಯಕ್ಷ ವಿಷ್ಣು ಸದಾಶಿವ ಕೋಕ್ಜೆ ಮತ್ತು ಸಂಘಟನೆಯ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಸಹಿತ ಪ್ರಮುಖರು ರ್ಯಾಲಿ ಉದ್ದೇಶಿಸಿ ಮಾತನಾಡಿದರು. ಪ್ರಯಾಗ್ ರಾಜ್ನಲ್ಲಿ ಈ ಅಭಿಯಾನ ಕೊನೆಗೊಳ್ಳಲಿದೆ. ಜ.31, ಫೆ.1ರಂದು ಕೊನೆಯ ಹಂತದ ಧರ್ಮ ಸಂಸತ್ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು