ಶಬರಿಮಲೆ ದೇಗುಲ ಪ್ರವೇಶ ವಿವಾದ: ಮತ್ತೆ ಹಿಂಸಾಚಾರ
Team Udayavani, Dec 11, 2018, 6:00 AM IST
ತಿರುವನಂತಪುರಂ: ಮಹಿಳೆಯರಿಗೆ ಶಬರಿಮಲೆ ದೇಗುಲ ಪ್ರವೇಶಕ್ಕೆ ಅವಕಾಶ ಸಂಬಂಧ ನಡೆಯುತ್ತಿರುವ ಸಂಘರ್ಷ ಇನ್ನೂ ತಣ್ಣಗಾಗಿಲ್ಲ. ಬೂದಿಮುಚ್ಚಿದ ಕೆಂಡದಂತೆ ಇರುವ ಶಬರಿಮಲೆಯಲ್ಲಿ, ಸೋಮವಾರ ಹಿಂಸಾಚಾರ ಮರುಕಳಿಸಿದೆ.
ಶಬರಿಮಲೆ ಸುತ್ತಮುತ್ತ ವಿಧಿಸಲಾದ ನಿಷೇಧಾಜ್ಞೆ ವಾಪಸ್ ಪಡೆಯುವಂತೆ ಯುಡಿಎಫ್ ಹಾಗೂ ಬಿಜೆಪಿಯ ಕೆಲವು ನಾಯಕರು ನಿರಶನ ಆರಂಭಿಸಿದ್ದು, ಅದಕ್ಕೆ ಸರಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಹೀಗಾಗಿ, ಕೇರಳ ಸರಕಾರ ಮಧ್ಯಪ್ರವೇಶಿಸಬೇಕು ಎಂದು ಕೋರಿ ಯುಡಿಎಫ್ ಮತ್ತು ಬಿಜೆಪಿ ಸೋಮವಾರ ಪ್ರತ್ಯೇಕ ಮೆರವಣಿಗೆಗಳನ್ನು ನಡೆಸಿದವು. ಈ ವೇಳೆ, ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದು, ಅದು ಹಿಂಸಾರೂಪ ಪಡೆದುಕೊಂಡಿತು. ಪೊಲೀಸರ ಮೇಲೆ ಕಲ್ಲು ತೂರಾಟವೂ ನಡೆಯಿತು. ಕೊನೆಗೆ ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಅಶ್ರುವಾಯು ಹಾಗೂ ಜಲಫಿರಂಗಿ ಪ್ರಯೋಗ ಮಾಡಿದರು. ಅಲ್ಲದೆ, ಕೆಲವು ಪ್ರಮುಖ ಪ್ರತಿಭಟನಾಕಾರರನ್ನು ಬಂಧಿಸಿ, ಬಿಡುಗಡೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್