ಜನ ಇಂದು ಅಹಂ ಮುಕ್ತ ಭಾರತ ಮಾಡಿದ್ದಾರೆ:ಬಿಜೆಪಿಗೆ ಎಚ್ಡಿಡಿ ಟಾಂಗ್
Team Udayavani, Dec 11, 2018, 1:43 PM IST
ಹೊಸದಿಲ್ಲಿ: ಪಂಚರಾಜ್ಯ ಫಲಿತಾಂಶದ ಕುರಿತಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಟ್ವೀಟ್ ಮೂಲಕ ಬಿಜೆಪಿಗೆ ಟಾಂಗ್ ನೀಡಿದ್ದು ಜನ ಇಂದು ಅಹಂ ಮುಕ್ತ ಭಾರತ ಮಾಡಿದ್ದಾರೆ ಎಂದಿದ್ದಾರೆ.
ಇದು ಪ್ರಜಾಪ್ರಭುತ್ವ ರಾಷ್ಟ್ರ.ಪ್ರಜೆಗಳು ಹೇಳಿದಂತೆ ನಾವು ಕೇಳಬೇಕಷ್ಟೇ. ನಾವು ಹೇಳಿದ್ದೆಲ್ಲ ಇಲ್ಲಿ ನಡೆಯುವುದಿಲ್ಲ. ಕಾಂಗ್ರೆಸ್ ಮುಕ್ತ ಭಾರತ, ಪ್ರತಿಪಕ್ಷ ಮುಕ್ತ ಭಾರತ ಮಾಡುತ್ತೇವೆಂಬುದೆಲ್ಲ ಕೇವಲ ಅಹಮಿಕೆ. ಜನ ಇಂದು ಅಹಂ ಮುಕ್ತ ಭಾರತ ಮಾಡಿದ್ದಾರೆ. ಸಮಸ್ಯೆ ಮುಕ್ತ ಭಾರತ ಮಾಡುವುದರತ್ತ ಅಧಿಕಾರರೂಢ ಬಿಜೆಪಿ ಮನಸ್ಸು ಮಾಡಲಿ ಎಂದು ಬರೆದಿದ್ದಾರೆ.
ಪಂಚರಾಜ್ಯಗಳ ಫಲಿತಾಂಶದಲ್ಲಿ ಛತ್ತೀಸ್ಗಢದಲ್ಲಿ ಬಿಜೆಪಿ ಮುಖಭಂಗ ಅನುಭವಿಸಿದ್ದು, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಹಿನ್ನಡೆ ಅನುಭವಿಸಿದ್ದು ಅಧಿಕಾರಕ್ಕೇರುವ ಕಷ್ಟ ಸಾಧ್ಯಗಳು ಎದುರಾಗಿವೆ. ತೆಲಂಗಾಣ ಮತ್ತು ಮಿಜೋರಾಂನಲ್ಲಿ ಬೆರಳೆಣಿಕೆಯ ಸ್ಥಾನಗಳನ್ನು ಮಾತ್ರ ಗೆದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್