ಆರ್ಬಿಐಗೆ ಶಕ್ತಿಕಾಂತ್ ನೇಮಕಕ್ಕೆ ಸ್ವಾಮಿ ತೀವ್ರ ಆಕ್ಷೇಪ
Team Udayavani, Dec 12, 2018, 2:33 PM IST
ಹೊಸದಿಲ್ಲಿ: ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ)ನ 25ನೇ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ನೇಮಕಗೊಳಿಸಿರುವುದಕ್ಕೆ ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣ್ಯನ್ ಸ್ವಾಮಿ ಅವರು ಆಕ್ಷೇಪ ವ್ಯಕ್ತ ಪಡಿಸಿದ್ದು , ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರವನ್ನು ಬರೆದಿದ್ದಾರೆ.
ಶಕ್ತಿಕಾಂತ್ ದಾಸ್ ಅವರನ್ನು ನೇಮಕಗೊಳಿಸಿದ್ದು ತಪ್ಪು, ಅವರು ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರೊಂದಿಗೆ ಭ್ರಷ್ಟ ಚಟುಟಿಕೆಗಳಲ್ಲಿ ಭಾಗಿಯಾದವರು ಮತ್ತು ಅವರನ್ನು ಕೋರ್ಟ್ ಕೇಸುಗಳಲ್ಲಿ ಪಾರು ಮಾಡಲು ಯತ್ನಿಸಿದವರು. ನನಗೆ ಗೊತ್ತಾಗುತ್ತಿಲ್ಲ ಯಾಕೆ ಅವರನ್ನು ಆಯ್ಕೆ ಮಾಡಿದ್ದಾರೆ ಎಂದು. ಈ ನಿರ್ಧಾರವರನ್ನು ಪ್ರಶ್ನಿಸಿ ನಾನು ಪ್ರಧಾನಿಗೆ ಪತ್ರವನ್ನು ಬರೆದಿದ್ದೇನೆ ಎಂದು ಸ್ವಾಮಿ ತಿಳಿಸಿದರು.
ಗವರ್ನರ್ ಸ್ಥಾನಕ್ಕೆ ಊರ್ಜಿತ್ ಪಟೇಲ್ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಅವರಿಂದ ತೆರವಾದ ಸ್ಥಾನಕ್ಕೆ ಕೇಂದ್ರ ಸರಕಾರವು ಶಕ್ತಿಕಾಂತ್ ದಾಸ್ರನ್ನು ನೇಮಕ ಮಾಡಿತ್ತು. 61 ವರ್ಷದ ಶಕ್ತಿಕಾಂತ್ ದಾಸ್ ಅವರು 3 ವರ್ಷಗಳ ಅವಧಿಗೆ ಆರ್ಬಿಐ ಗವರ್ನರ್ ಆಗಿ ಮುಂದುವರಿಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ