ಚುನಾವಣೇಲಿ ಸೋತ ಆಘಾತಕ್ಕೆ ಇಬ್ಬರು ನಾಯಕರು ಆಸ್ಪತ್ರೆಗೆ ದಾಖಲು!
Team Udayavani, Dec 12, 2018, 6:20 PM IST
ತೆಲಂಗಾಣ: ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ನೇತೃತ್ವದ ಟಿಆರ್ ಎಸ್ ಭರ್ಜರಿ ಜಯಭೇರಿ ಬಾರಿಸುವ ಮೂಲಕ ಮತ್ತೆ ತೆಲಂಗಾಣದ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಮತ್ತೊಂದೆಡೆ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡ ಇಬ್ಬರು ಪ್ರಬಲ ರಾಜಕೀಯ ನಾಯಕರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ವರದಿಯಾಗಿದೆ.
ಚುನಾವಣೆಯಲ್ಲಿ ಸೋತ ಆಘಾತದಿಂದ ದಿಢೀರನೆ ಕುಸಿದು ಬಿದ್ದ ಕಾಂಗ್ರೆಸ್ ಪಕ್ಷದ ನಲಗೊಂಡಾ ಅಭ್ಯರ್ಥಿ ಕೋಮಟಿ ರೆಡ್ಡಿ ವೆಂಕಟ ರೆಡ್ಡಿಯನ್ನು ಮಂಗಳವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೇ ರೀತಿ ಟಿಆರ್ ಎಸ್ ಪಕ್ಷದ ಪಾಲೈರ್ ಕ್ಷೇತ್ರದ ಅಭ್ಯರ್ಥಿ ತುಮ್ಮಲಾ ನಾಗೇಶ್ವರ್ ರಾವ್ ಅವರನ್ನು ಕೂಡಾ ಆಸ್ಪತ್ರೆಗೆ ಸೇರಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಟಿಆರ್ ಎಸ್ ಅಭ್ಯರ್ಥಿ ಕಂಚಾರ್ಲಾ ಭೂಪಾಲ್ ರೆಡ್ಡಿ ಎದುರು ವೆಂಕಟ ರೆಡ್ಡಿ ಅವರು 8,633 ಮತಗಳ ಅಂತರದಿಂದ ಸೋತಿದ್ದರು. ಫಲಿತಾಂಶ ಘೋಷಣೆಯಾಗುತ್ತಿದ್ದಂತೆಯೇ ವೆಂಕಟ ರೆಡ್ಡಿ ರಕ್ತದೊತ್ತಡ ಹೆಚ್ಚಾಗಿ ಪ್ರಜ್ಞಾಹೀನರಾಗಿ ಬಿದ್ದಿದ್ದರು. ಆದರೆ ಆಸ್ಪತ್ರೆಯ ಮೂಲಗಳು ರೆಡ್ಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದನ್ನು ನಿರಾಕರಿಸಿದೆ.