ನಿರ್ಭಯಾ ಅಪರಾಧಿಗಳಿಗೆ 2 ವಾರದೊಳಗೆ ನೇಣು: ಸುಪ್ರೀಂ ನಿಂದ ಅರ್ಜಿ ವಜಾ
Team Udayavani, Dec 13, 2018, 12:01 PM IST
ಹೊಸದಿಲ್ಲಿ : ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಮರಣ ದಂಡನೆ ಶಿಕ್ಷೆ ವಿಧಿಸಲ್ಪಟ್ಟಿರುವ ಎಲ್ಲ ನಾಲ್ವರು ಅಪರಾಧಿಗಳನ್ನು ಎರಡು ವಾರಗಳ ಒಳಗೆ ನೇಣಿಗೇರಿಸಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ಗುರುವಾರ ವಜಾ ಮಾಡಿದೆ.
ವಕೀಲ ಎ ಎ ಶ್ರೀವಾಸ್ತವ ಅವರು ನಿರ್ಭಯಾ ಪ್ರಕರಣದಲ್ಲಿ ಮರಣ ದಂಡನೆ ಶಿಕ್ಷೆ ವಿಧಿಸಲ್ಪಟ್ಟಿರುವ ನಾಲ್ವರು ಅಪರಾಧಿಗಳಿಗೆ ಎರಡು ವಾರಗಳ ಒಳಗೆ ನೇಣು ಶಿಕ್ಷೆಯನ್ನು ಜಾರಿ ಮಾಡುವಂತೆ ಸರಕಾರಕ್ಕೆ ನಿರ್ದೇಶ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.
ನೇಣು ಶಿಕ್ಷೆ ಜಾರಿ ವಿಳಂಬದಿಂದಾಗಿ ದೇಶದಲ್ಲಿ ಅತ್ಯಾಚಾರಿಗಳಿಗೆ ಭಯವೇ ಇಲ್ಲವಾಗಿದೆ; ಪತ್ರಿಕೆಗಳಲ್ಲಿ ನಿರಂತರವಾಗಿ ಅತ್ಯಾಚಾರದ ವರದಿಗಳು ಪ್ರಕಟವಾಗುತ್ತಿರುವುದೇ ಇದಕ್ಕೆ ಸಾಕ್ಷಿ ಎಂದು ಶ್ರೀವಾಸ್ತವ ಅವರು ತಮ್ಮ ಮನವಿಯಲ್ಲಿ ಹೇಳಿದ್ದರು.
ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಮರಣ ದಂಡನೆ ಶಿಕ್ಷೆ ವಿಧಿಸಲ್ಪಟ್ಟಿರುವ ಅಪರಾಧಿಗಳೆಂದರೆ ಮುಕೇಶ್, ಪವನ್ ಗುಪ್ತಾ, ವಿನಯ್ ಶರ್ಮಾ ಮತ್ತು ಅಕ್ಷಯ್.
ಈ ಅಪರಾಧಿಗಳು ತಮ್ಮ ನೇಣು ಶಿಕ್ಷೆಯ ತೀರ್ಪಿನ ಪುನರ್ ಪರಿಶೀಲನೆ ಕೋರಿದ ಅರ್ಜಿ ವಜಾಗೊಂಡು ನಾಲ್ಕೂವರೆ ತಿಂಗಳೇ ಸಂದಿರುವುದರಿಂದ ಇನ್ನಷ್ಟು ತಡ ಮಾಡದೇ ಇವರನ್ನು ಎರಡು ವಾರಗಳ ಒಳಗೆ ನೇಣಿಗೇರಿಸುವಂತೆ ವಕೀಲ ಶ್ರೀವಾಸ್ತವ ಕೋರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ