ಬಾಹುಬಲಿ ಮುಹೂರ್ತದಲ್ಲಿ ಕೆಸಿಆರ್‌ ಪ್ರಮಾಣ


Team Udayavani, Dec 14, 2018, 8:10 AM IST

kcr-14-12.jpg

ಹೊಸದಿಲ್ಲಿ/ಹೈದರಾಬಾದ್‌: ವಿಧಾನಸಭೆ ಚುನಾವಣೆಯಲ್ಲಿ ಅಭೂತ ಪೂರ್ವ ಜಯ ಸಾಧಿಸಿದ ತೆಲಂಗಾಣ ರಾಷ್ಟ್ರ ಸಮಿತಿ ಅಧ್ಯಕ್ಷ ಕವಲಕುಂಟ್ಲ ಚಂದ್ರಶೇಖರ ರಾವ್‌ (ಕೆಸಿಆರ್‌) ಗುರುವಾರ 2ನೇ ಬಾರಿಗೆ ತೆಲಂಗಾಣದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ಮಧ್ಯಾಹ್ನ 1.24ಕ್ಕೆ ‘ಬಾಹುಬಲಿ ಮುಹೂರ್ತ’ದಲ್ಲಿ  ಕೆಸಿಆರ್‌ಗೆ ರಾಜ್ಯಪಾಲ ಇ.ಎಸ್‌.ಎಲ್‌.ನರಸಿಂಹನ್‌ ಅಧಿಕಾರ ಮತ್ತು ಗೋಪ್ಯತೆ ಪ್ರಮಾಣ ಬೋಧಿಸಿದರು.

ರಾವ್‌ ಜತೆ, ವಿಧಾನ ಪರಿಷತ್‌ ಸದಸ್ಯ ಮೊಹಮ್ಮದ್‌ ಮೆಹಮೂದ್‌ ಅಲಿ ಮಾತ್ರ ಸಚಿವರಾಗಿ ಪ್ರಮಾಣ ಸ್ವೀಕರಿಸಿದ್ದಾರೆ. ಡಿ.18 ರಂದು ಸಂಪುಟ ವಿಸ್ತರಣೆ ನಡೆವ ಸಾಧ್ಯತೆ ಇದೆ. ರಾವ್‌ ಅವರ ಕುಟುಂಬ ಸದಸ್ಯರು, ಟಿ ಆರ್‌ಎಸ್‌ ನಾಯಕರು ಹಾಜರಿದ್ದರು. ವಿಪಕ್ಷಗಳ ನಾಯಕರು ಕಾರ್ಯಕ್ರಮಕ್ಕೆ ಆಗಮಿಸಿರಲಿಲ್ಲ. ಆದರೆ ಕಾಂಗ್ರೆಸ್‌ ಎಂಎಲ್‌ಎಸಿ ಪಿ.ಸುಧಾಕರ ರೆಡ್ಡಿ, ಎಂಐಎಂ ನಾಯಕ ಅಸಾದುದ್ದೀನ್‌ ಒವೈಸಿ ಆಗಮಿಸಿದ್ದರು.

ಅರ್ಚಕರು ಸೂಚಿಸಿದ ಮುಹೂರ್ತ: ಶಕುನ ಮತ್ತು ಇತರ ಧಾರ್ಮಿಕ ವಿಚಾರಗಳಲ್ಲಿ ನಂಬಿಕೆ ಇರುವ ಚಂದ್ರಶೇಖರ ರಾವ್‌ಗೆ ಬೊಂಗಿರ್‌ ಜಿಲ್ಲೆಯ ಯಾದಗಿರಿಯಲ್ಲಿರುವ ಶ್ರೀ ಲಕ್ಷ್ಮೀನರಸಿಂಹ ದೇಗುಲದ ಅರ್ಚಕರು 1.24ರ ಮುಹೂರ್ತದ ಬಗ್ಗೆ ಸಲಹೆ ನೀಡಿದ್ದರು. ಯಾವುದೇ ಗ್ರಹಗತಿಗಳ ತೊಂದರೆ ಇಲ್ಲದೆ ಉತ್ತಮ ಸ್ಥಾನದಲ್ಲಿದ್ದು, ಕೆಸಿಆರ್‌ಗೆ ಒಳ್ಳೆಯ ಆಡಳಿತ ನೀಡಲು ನೆರವಾಗಲಿದೆ. ಜತೆಗೆ ಅವರಿಗೆ ‘ರಾಜಯೋಗ’ವೂ ಇರಲಿದೆ ಎಂದು ಹೇಳಿದ್ದಾರೆ. 

ನೋಟಾ ಕೊಟ್ಟ ಪೆಟ್ಟು
ಮಧ್ಯಪ್ರದೇಶದ 22 ಕ್ಷೇತ್ರಗಳಲ್ಲಿ ‘ನನ್‌ ಆಫ್ ದ ಎಬವ್‌’ (ಮೇಲ್ಕಂಡ ಯಾರೂ ಅಲ್ಲ) ಆಯ್ಕೆ ಬಿಜೆಪಿಯ ಜಯದ ಅಂತರ ತಗ್ಗಿಸಿದೆ. ಈ ಅಂಶವನ್ನು ಚುನಾವಣಾ ಆಯೋಗದ ದಾಖಲೆಗಳು ಪುಷ್ಟೀಕರಿಸಿವೆ. 5,42,295 ಮಂದಿ ಇವಿಎಂಗಳಲ್ಲಿ ನೋಟಾ ಬಟನ್‌ ಒತ್ತಿದ್ದಾರೆ. ಅದು ಚಲಾವಣೆಯಾದ ಮತಗಳ ಶೇ.1.4ರಷ್ಟಾಗುತ್ತದೆ. 2013ರ ಚುನಾವಣೆಯಲ್ಲಿ 6.43 ಲಕ್ಷ (ಶೇ.1.9) ಮಂದಿ ಅಭ್ಯರ್ಥಿಗಳನ್ನು ತಿರಸ್ಕರಿಸಿದ್ದರು. 22 ಕ್ಷೇತ್ರಗಳ ಪೈಕಿ 12 ಕಾಂಗ್ರೆಸ್‌, ನಾಲ್ವರು ಸಚಿವರೂ ಸೇರಿ 9 ಬಿಜೆಪಿ,  1 ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಜಯಗಳಿಸಿದ್ದಾರೆ. ಇದರ ಜತೆಗೆ ಬಿಎಸ್‌ಪಿ, ಮೇಲ್ವರ್ಗದ ಕೋಪ ಕೂಡ ಬಿಜೆಪಿಗೆ ಬರಬೇಕಾಗಿದ್ದ ಮತಗಳನ್ನು ತಪ್ಪಿಸಿತು.

ಬಿಜೆಪಿಯ ಸೋಲು ಎನ್ನುವುದು ಅನ್ಯಾಯದ ಮತ್ತು ಸುಳ್ಳಿನ ಸೋಲು. ಒಬ್ಬನ ಸೋಲಿನ ಜತೆಗೆ ಗೆಲುವನ್ನೂ ವಿನೀತವಾಗಿ ಸ್ವೀಕರಿಸುವುದೇ ನಮ್ಮ ಕ್ರಮ. 2014ರ ಚುನಾವಣೆ ಬಳಿಕ ಪದ್ಧತಿಯೇ ಬದಲಾಯಿತು. ಕಾಂಗ್ರೆಸ್‌ ಮುಕ್ತ ಭಾರತ ಎಂದು ಬಿಜೆಪಿಯವರು ಹೇಳುತ್ತಿದ್ದರು. ಆದರೆ ರಾಹುಲ್‌ ಗಾಂಧಿಯವರು ಬಿಜೆಪಿಯ ಭದ್ರಕೋಟೆಯಲ್ಲಿಯೇ ಜಯ ಸಾಧಿಸಿದರು.
– ಶಿವಸೇನೆ, ಮುಖವಾಣಿ ‘ಸಾಮ್ನಾ’ದಲ್ಲಿ

ಪಂಚರಾಜ್ಯ ಚುನಾವಣೆ ಫ‌ಲಿತಾಂಶ ಮುಂಬರಲಿರುವ ಲೋಕಸಭೆ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಪ್ರಧಾನಿ ಮೋದಿ ನೇತೃತ್ವದಲ್ಲಿ ಎನ್‌.ಡಿ.ಎ. ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸುತ್ತದೆ. 
– ರಾಮ್‌ವಿಲಾಸ್‌ ಪಾಸ್ವಾನ್‌, ಕೇಂದ್ರ ಸಚಿವ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.