ಸಿಕ್ಖ್ ವಿರೋಧಿ ದೊಂಬಿ: ಸಜ್ಜನ್ ಕುಮಾರ್ಗೆ ಜೀವಾವಧಿ ಜೈಲು ಶಿಕ್ಷೆ
Team Udayavani, Dec 17, 2018, 11:52 AM IST
ಹೊಸದಿಲ್ಲಿ : ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಅವರನ್ನು 1984ರ ಸಿಕ್ಖ್ ವಿರೋಧಿ ದೊಂಬಿ ಪ್ರಕರಣದ ದೋಷಿ ಎಂದು ದಿಲ್ಲಿ ಹೈಕೋರ್ಟ್ ಇಂದು ಸೋಮವಾರ ಘೋಷಿಸಿ ಜೀವಾವಧಿ ಜೈಲು ಶಿಕ್ಷೆಯನ್ನು ಪ್ರಕಟಿಸಿದೆ.
ಸಜ್ಜನ್ ಕುಮಾರ್ ಅವರನ್ನು ಈ ಪ್ರಕರಣದಲ್ಲಿ ಈ ಮೊದಲು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ವಜಾ ಮಾಡಿ ದಿಲ್ಲಿ ಹೈಕೋರ್ಟ್ ಈ ತೀರ್ಪು ನೀಡಿತು. 2018ರ ಡಿಸೆಂಬರ್ 31ರೊಳಗೆ ಪೊಲೀಸರಿಗೆ ಶರಣಾಗುವಂತೆ ನ್ಯಾಯಾಲಯ ಆದೇಶಿಸಿತು.
ಆಗಿನ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಯನ್ನುಅನುಸರಿಸಿ 1984ರ ನವೆಂಬರ್ 1ರಂದು ದಿಲ್ಲಿಯ ಕಂಟೋನ್ಮೆಂಟ್ ಪ್ರದೇಶದ ರಾಜಾಜಿ ನಗರದಲ್ಲಿ ಕುಟುಂಬವೊಂದರ ಐವರು ಸದಸ್ಯರನ್ನು ಹತ್ಯೆಗೈಯಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣಾ ನ್ಯಾಯಾಲಯ ಸಜ್ಜನ್ ಕುಮಾರ್ ಅವರನ್ನು ಖುಲಾಸೆ ಗೊಳಿಸಿತ್ತು; ಆದರೆ ಅದೇ ವೇಳೆ ಕಾಂಗ್ರೆಸ್ ಕೌನ್ಸಿಲರ್ ಬಲವಾನ್ ಖೋಖರ್, ನಿವೃತ್ತ ನೌಕಾಪಡೆ ಅಧಿಕಾರಿ ಕ್ಯಾಪ್ಟನ್ ಭಾಗ್ಮಾಲ್, ಗಿರಿಧಾರಿ ಲಾಲ್ ಮತ್ತು ಇನ್ನಿಬ್ಬರನ್ನು ದೋಷಿಗಳೆಂದು ಸಾರಿತ್ತು.
ಖೋಖರ್, ಭಾಗ್ಮಾಲ್ ಮತ್ತು ಗಿರಿಧಾರಿ ಲಾಲ್ ಅವರಿಗೆ ನ್ಯಾಯಾಲಯ ಜೀವಾವಧಿ ಜೈಲು ಶಿಕ್ಷೆ ವಿಧಿಸಿದೆ. ಮಾಜಿ ಶಾಸಕ ಮಹೇಂದರ್ ಯಾದವ್ ಮತ್ತು ಕಿಶನ್ ಖೋಖರ್ ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.
2013ರ ಮೇ ತಿಂಗಳಲ್ಲಿ ಪ್ರಕರಣದ ಆರೋಪಿಗಳು ವಿಚಾರಣಾ ನ್ಯಾಯಾಲಯ ತಮ್ಮನ್ನು ದೋಷಿ ಎಂದು ಪ್ರಕಟಿಸಿ ನೀಡಿದ್ದ ಶಿಕ್ಷೆಯ ತೀರ್ಪನ್ನು ಹೈಕೋರ್ಟಿನಲ್ಲಿ ಪ್ರಶ್ನಿಸಿದ್ದರು.
ಸಜ್ಜನ್ ಕುಮಾರ್ ಅವರ ಖುಲಾಸೆಯ ತೀರ್ಪನ್ನು ಪ್ರಶ್ನಿಸಿದ್ದ ಸಿಬಿಐ, ಆರೋಪಿಗಳೆಲ್ಲ ಕೂಡಿಕೊಂಡು ಧಾರ್ಮಿಕ ನಿವಾರಣಾ ಹತ್ಯೆಯನ್ನು ಕೈಗೊಳ್ಳಲು ಕೋಮು ದೊಂಬಿಯ ಸಂಚನ್ನು ರೂಪಿಸುವಲ್ಲಿ ತೊಡಗಿಕೊಂಡಿದ್ದರು ಎಂದು ಆರೋಪಿಸಿತ್ತು.
ಜಸ್ಟಿಸ್ ಎಸ್ ಮರಳೀಧರ ಮತ್ತು ಜಸ್ಟಿಸ್ ವಿನೋದ್ ಗೋಯಲ್ ಅವರನ್ನು ಒಳಗೊಂಡ ಪೀಠವು ಅಕ್ಟೋಬರ್ 29ರಂದು ಸಿಬಿಐ, ದೊಂಬಿ ಸಂತ್ರಸ್ತರು ಮತ್ತು ದೋಷಿಗಳು ಸಲ್ಲಿಸಿದ್ದ ಅಪೀಲುಗಳ ಮೇಲಿನ ವಿಚಾರಣೆಯನ್ನು ಮುಗಿಸಿ ತೀರ್ಪನ್ನು ಕಾಯ್ದಿರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ