ಸಿಕ್ಖ್ ವಿರೋಧಿ ದೊಂಬಿ: ಗಾಂಧಿ ಕುಟುಂಬದ ಪಾತ್ರ ಇಲ್ಲ: ಪಂಜಾಬ್ CM
Team Udayavani, Dec 17, 2018, 3:40 PM IST
ಹೊಸದಿಲ್ಲಿ : 1984ರ ಸಿಕ್ಖ್ ವಿರೋಧಿ ದೊಂಬಿ ಪ್ರಕರಣದಲ್ಲಿ ಆರೋಪಿ ಕಾಂಗ್ರೆಸ್ ಪಕ್ಷದ ನಾಯಕ ಸಜ್ಜನ್ ಕುಮಾರ್ಗೆ ಜೀವಾವಧಿ ಜೈಲು ಶಿಕ್ಷೆ ವಿಧಿಸಿ ದಿಲ್ಲಿ ಹೈಕೋರ್ಟ್ ನೀಡಿರುವ ತೀರ್ಪನ್ನು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಸ್ವಾಗತಿಸಿದ್ದಾರೆ.
ಹಾಗಿದ್ದರೂ 1984ರ ಸಿಕ್ಖ್ ವಿರೋಧಿ ದೊಂಬಿಯಲ್ಲಿ ಕಾಂಗ್ರೆಸ್ ಪಕ್ಷದ್ದಾಗಲೀ, ಗಾಂಧಿ ಕುಟುಂಬದವರದ್ದಾಗಲೀ ಯಾವುದೇ ಪಾತ್ರ ಇರಲಿಲ್ಲ ಎಂದು ಹೇಳಿದರು.
ಸ್ವತಂತ್ರ ಭಾರತದ ಇತಿಹಾಸದಲ್ಲೇ ಅತ್ಯಂತ ಘೋ ಕೋಮು ಹಿಂಸೆಯ ಈ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಯಾಗುವ ಮೂಲಕ ಪ್ರಕರಣದ ಸಂತ್ರಸ್ತರಿಗೆ ಕೊನೆಗೂ ನ್ಯಾಯ ದೊರಕಿದಂತಾಗಿದೆ ಎಂದು ಅಮರೀಂದರ್ ಸಿಂಗ್ ಹೇಳಿದ್ದಾರೆ.
ಬಿಜೆಪಿಯ ಚಿತಾವಣೆಯಲ್ಲಿ ಬಾದಲ್ ಸಿಕ್ಖ್ ವಿರೋಧಿ ದೊಂಬಿ ಪ್ರಕರಣದಲ್ಲಿ ಗಾಂಧಿ ಕುಟುಂಬದ ಹೆಸರನ್ನು ಈಗಲೂ ಎಳೆಯುತ್ತಿರುವುದನ್ನು ಅಮರಿಂದರ್ ಸಿಂಗ್ ಖಂಡಿಸಿದರು.
ಇದೇ ವೇಳೆ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಸುನೀಲ್ ಕುಮಾರ್ ಜಾಖಡ್ ಅವರು ದಿಲ್ಲಿ ಹೈಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸಿದ್ದಾರೆ. ದೊಂಬಿ ಸಂತ್ರಸ್ತರಿಗೆ ಕೊನೆಗೂ ನ್ಯಾಯ ಸಿಕ್ಕಿತು ಎಂದವರು ಹೇಳಿದ್ದಾರೆ.
ಆದರೆ ಶಿರೋಮಣಿ ಅಕಾಲಿ ದಳ (ಎಸ್ಎಡಿ), 1984ರ ಸಿಕ್ಖ್ ದೊಂಬಿ ಪ್ರಕರಣದಲ್ಲಿ ಗಾಂಧಿ ಕುಟುಂಬದ ವಿರುದ್ಧ ದಾಳಿ ಮಾಡುವುದನು ಮುಂದುವರಿಸಿದೆ. ಪಕ್ಷದ ಹಿರಿಯ ನಾಯಕಿ ಮತ್ತು ಕೇಂದ್ರ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ಅವರು, ಈ ದೊಂಬಿ ಪ್ರಕರಣದ ತನಿಖೆಯು ಅಂತಿಮವಾಗಿ ಗಾಂಧಿ ಕುಟುಂಬದೆಡೆಗೆಯೇ ಸಾಗುತ್ತದೆ ಎಂದು ಹೆಳಿದ್ದಾರೆ.
ಇವತ್ತು ಸಜ್ಜನ್ ಕುಮಾರ್, ನಾಳೆ ಜಗದೀಶ್ ಟೈಟ್ಲರ್, ನಾಡಿದ್ದು ಕಮಲ್ ನಾಥ್ ಮತ್ತು ಅಂತಿಮವಾಗಿ ಗಾಂಧಿ ಕುಟುಂಬ ದೋಷಿಗಳೆಂದು ಸಾಬೀತಾಗುತ್ತದೆ ಎಂದು ಹರ್ಸಿಮ್ರತ್ ಹೇಳಿದರು.
2015ರಲ್ಲಿ ನಾನು ಸಿಕ್ಖ್ ವಿರೋಧಿ ದೊಂಬಿ ಪ್ರಕರಣದ ತನಿಖೆಗೆ ಎಸ್ಐಟಿ ರಚಿಸಬೇಕೆಂದು ಮಾಡಿಕೊಂಡಿದ್ದ ಕೋರಿಕೆಯನ್ನು ಮನ್ನಿಸಿದ್ದ ಪ್ರಧಾನಿ ಮೋದಿ ಅವರಿಗೆ ನನ್ನ ಧನ್ಯವಾದಗಳು ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ