ಭಾರತ ತಲುಪಿದ ಹಮೀದ್ ಅನ್ಸಾರಿ
Team Udayavani, Dec 19, 2018, 10:21 AM IST
ಹೊಸದಿಲ್ಲಿ: ಸ್ನೇಹಿತೆಯನ್ನು ಭೇಟಿಯಾಗಲು ತೆರಳಿದ್ದಾಗ ಪಾಕಿಸ್ಥಾನದಲ್ಲಿ ಬಂಧನಕ್ಕೊಳಗಾಗಿದ್ದ ಭಾರತೀಯ ಎಂಜಿನಿಯರ್ ಹಮೀದ್ ಅನ್ಸಾರಿ ಬಿಡುಗಡೆಗೊಂಡು ಮಂಗಳವಾರ ಭಾರತಕ್ಕೆ ವಾಪಸಾಗಿದ್ದಾರೆ. ಈತನನ್ನು ಕುಟುಂಬದವರು ಭಾವುಕವಾಗಿ ಸ್ವಾಗತಿಸಿದ್ದಾರೆ. ಪೇಶಾವರದ ಜೈಲಿನಿಂದ ಅನ್ಸಾರಿಯವರನ್ನು ಬಿಡುಗಡೆ ಮಾಡಲಾಗಿದೆ. ಅತ್ತಾರಿ -ವಾಘಾ ಗಡಿಯಲ್ಲಿ ಅನ್ಸಾರಿ ಆಗಮಿಸುತ್ತಿದ್ದಂತೆ ಅವರ ಕುಟುಂಬ ಸದಸ್ಯರು ಅಪ್ಪಿ ಸ್ವಾಗತಿಸಿದ್ದಾರೆ. ಗಡಿಯಲ್ಲಿ ಅವರ ತಾಯಿ ಫೌಜಿಯಾ, ತಂದೆ ನಿಹಾಲ್ ಅನ್ಸಾರಿ ಸೇರಿದಂತೆ ಕುಟುಂಬ ಸದಸ್ಯರು ಭೇಟಿಯಾದರು.
2012ರಲ್ಲಿ ಸ್ನೇಹಿತೆಯನ್ನು ಭೇಟಿಯಾಗಲು ಆಫ್ಘಾನಿಸ್ತಾನ ಮೂಲಕ ಪಾಕಿಸ್ತಾನ ಪ್ರವೇಶಿಸಿದ್ದ ಮುಂಬೈ ನಿವಾಸಿ ಅನ್ಸಾರಿಯನ್ನು ಭಾರತದ ಗುಪ್ತಚರ ಇಲಾಖೆ ಸಿಬ್ಬಂದಿ ಎಂಬ ಗುಮಾನಿ ಮೇಲೆ ಪಾಕ್ ಸೆರೆಹಿಡಿದಿತ್ತು. 3 ವರ್ಷಗಳ ಅಧಿಕೃತ ಜೈಲು ಶಿಕ್ಷೆ ಸೇರಿ ಒಟ್ಟು 6 ವರ್ಷಗಳ ಕಾಲ ಅವರನ್ನು ಒತ್ತೆ ಇರಿಸಿಕೊಂಡಿತ್ತು. ಕಳೆದ ಡಿ.15ರಂದು ಬಿಡುಗಡೆ ಮಾಡಿತ್ತು. ಆದರೂ ಅವರ ದಾಖಲೆ ಪತ್ರಗಳು ಸಮರ್ಪಕವಾಗಿರಲಿಲ್ಲ ಎಂದು ಇಸ್ಲಾಮಾಬಾದ್ನಲ್ಲಿ ಅವರನ್ನು ಇರಿಸಲಾಗಿತ್ತು. ಕಡೆಗೂ ಮಂಗಳವಾರ ಅವರನ್ನು ಭಾರತಕ್ಕೆ ಕಳಿಸಿಕೊಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ