ಮೋದಿಗೆ ಸ್ಕ್ರಿಪ್ಟ್ ಬೇಕಾಗಿಲ್ಲ
Team Udayavani, Dec 21, 2018, 6:10 AM IST
ನವದೆಹಲಿ: “ಪತ್ರಕರ್ತರನ್ನು ಎದುರಿಸಲು ನಾನು ಭಯಪಡುತ್ತಿರಲಿಲ್ಲ” ಎಂದು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ.
ಪ್ರಧಾನಿ ಮೋದಿಗೆ ಯಾರೂ ಸ್ಕ್ರಿಪ್ಟ್ ಬರೆದುಕೊಡಬೇಕಾಗಿಲ್ಲ, ಹಾಗೆಯೇ ಟೆಲಿಪ್ರಾಂಪ್ಟರ್ ಕೂಡ ಬೇಕಾಗಿಲ್ಲ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಟಾಸ್ ನಖ್ವಿ ಹೇಳಿದ್ದಾರೆ. ಸೋಮವಾರ ನಡೆದ ತಮ್ಮದೇ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು, ಪತ್ರಿಕಾಗೋಷ್ಠಿ ನಡೆಸದ ಪ್ರಧಾನಿ ಮೋದಿ ವಿರುದ್ಧ ಟೀಕೆ ಮಾಡಿದ್ದರು. ನಾನು ಪ್ರತಿ ಬಾರಿ ವಿದೇಶ ಪ್ರವಾಸಕ್ಕೆ ಹೋದಾಗಲೂ ವಿಮಾನದಲ್ಲೇ ಪತ್ರಿಕಾಗೋಷ್ಠಿ ನಡೆಸುತ್ತಿದ್ದೆ. ಆದರೆ, ಈಗ ಮೋದಿ ಅವರು ಪತ್ರಿಕಾಗೋಷ್ಠಿಯನ್ನೇ ನಡೆಸಿಲ್ಲ ಎಂದಿದ್ದರು.
ಈ ಸಂಬಂಧ ಮಂಗಳವಾರ ಮಾತನಾಡಿದ ಬಿಜೆಪಿ ನಾಯಕ ಮುಖಾ¤ರ್ ಅಬ್ಟಾಸ್ ನಖೀÌ, ಡಾ. ಸಿಂಗ್ ಅವರು, ಯಾರೋ ಬರೆದುಕೊಟ್ಟದ್ದನ್ನು, ಟೆಲಿಪ್ರಾಂಪ್ಟರ್ನಲ್ಲಿ ಬಂದದ್ದನ್ನು ಅಥವಾ ಯಾರೋ ನಿರ್ದೇಶಿಸಿದ್ದನ್ನು ಮಾತನಾಡುತ್ತಿದ್ದರು. ಡಾ. ಸಿಂಗ್ ಕೈಗೊಂಬೆ ಪ್ರಧಾನಿಯಾಗಿದ್ದರು ಎಂದು ಛೇಡಿಸಿದ್ದಾರೆ. ಇನ್ನು ಬಿಜೆಪಿಯ ಮತ್ತೂಬ್ಬ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಕೂಡ ಡಾ. ಸಿಂಗ್ ವಿರುದ್ಧ ವ್ಯಂಗ್ಯವಾಡಿದ್ದಾರೆ. ಪತ್ರಿಕಾಗೋಷ್ಠಿ ನಡೆಸುವುದು ದೊಡ್ಡದಲ್ಲ, ಅದರಲ್ಲಿ ನೀವು ಏನು ಮಾತನಾಡುತ್ತೀರಿ ಎಂಬುದೇ ಮುಖ್ಯ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ