ಆಧಾರ್ ಕೊಡಲೇಬೇಕು ಎಂದರೆ 1 ಕೋಟಿ ದಂಡ!
Team Udayavani, Dec 20, 2018, 6:00 AM IST
ನವದೆಹಲಿ: ಗುರುತು ಹಾಗೂ ವಿಳಾಸ ದಾಖಲೆಯನ್ನಾಗಿ ಅಧಾರ್ ನೀಡಲೇಬೇಕು ಎಂದು ಟೆಲಿಕಾಂ ಕಂಪನಿಗಳು ಹಾಗೂ ಬ್ಯಾಂಕ್ಗಳು ಗ್ರಾಹಕರನ್ನು ಒತ್ತಾಯಿಸುವಂತಿಲ್ಲ. ಹಾಗೇನಾದರೂ ಒತ್ತಾಯ ಮಾಡಿದರೆ 1 ಕೋಟಿ ರೂ. ದಂಡ ತೆರಬೇಕಾಗುತ್ತದೆ. ಅಷ್ಟೇ ಅಲ್ಲ, ಹೀಗೆ ಒತ್ತಾಯ ಮಾಡಿದ ಸಿಬ್ಬಂದಿಯು 10 ವರ್ಷಗಳವರೆಗೆ ಜೈಲು ವಾಸ ಅನುಭವಿಸಬೇಕಾಗುತ್ತದೆ.
ಈ ದಂಡದ ವಿವರಗಳನ್ನು ಕೇಂದ್ರ ಸರ್ಕಾರ ಸೋಮವಾರ ಅನುಮೋದಿಸಿದ ತಿದ್ದುಪಡಿಯಲ್ಲಿ ವಿವರಿಸಲಾಗಿದೆ. ಕೆವೈಸಿ ನಿಯಮಾವಳಿಯನ್ನು ಪೂರೈಸಲು ಗ್ರಾಹಕರು ಆಧಾರ್ ನೀಡುವುದು ಸಂಪೂರ್ಣವಾಗಿ ಐಚ್ಛಿಕವಾಗಿರಲಿದ್ದು, ಆಧಾರ್ ಮಾತ್ರ ನೀಡುವಂತೆ ಗ್ರಾಹಕರನ್ನು ಒತ್ತಾಯ ಮಾಡುವಂತಿಲ್ಲ.ಇತ್ತೀಚೆಗೆ ಆಧಾರ್ಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹಣ ದುರ್ಬಳಕೆ ಕಾಯ್ದೆ ಮತ್ತು ಭಾರತೀಯ ಟೆಲಿಗ್ರಾಫ್ ಕಾಯ್ದೆಗೆ ತಿದ್ದುಪಡಿ ಪ್ರಸ್ತಾಪಿಸಿದೆ.
ಆಧಾರ್ ಡೇಟಾ ದುರ್ಬಳಕೆ ಮಾಡಲು ಪ್ರಯತ್ನಿಸಿದರೆ 50 ಲಕ್ಷ ದಂಡ ಹಾಗೂ 10 ವರ್ಷ ಜೈಲು ಶಿಕ್ಷೆ ವಿಧಿಸುವ ಪ್ರಸ್ತಾಪ ಕೂಡ ತಿದ್ದುಪಡಿಯಲ್ಲಿದೆ.
ಇನ್ನೊಂದೆಡೆ ಆಧಾರ್ ಮಾಹಿತಿಯನ್ನು ಪಡೆದುಕೊಳ್ಳುವುದಕ್ಕೂ ಮೊದಲು ಗ್ರಾಹಕರಿಂದ ಸಮ್ಮತಿ ಪಡೆಯದೇ ಇದ್ದರೆ 10 ಸಾವಿರ ರೂ. ದಂಡ ಹಾಗೂ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಐಡಿ ಅಥವಾ ಫೋಟೋಗಳನ್ನು ಅನಧಿಕೃತವಾಗಿ ಪ್ರಕಟಿಸಿದರೆ 10 ಸಾವಿರ ರೂ. ಇಂದ 1 ಲಕ್ಷ ರೂ.ವರೆಗೆ ಶಿಕ್ಷೆ ವಿಧಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ