ಮೂರು ಸಾವಿರ ಭಾರತೀಯರು ನಿರಾಳ
Team Udayavani, Dec 21, 2018, 6:50 AM IST
ಚಂಡೀಗಡ: ಸೌದಿ ಅರೇಬಿಯಾದಲ್ಲಿ ಅತಂತ್ರರಾಗಿರುವ ಸುಮಾರು 3 ಸಾವಿರ ಮಂದಿ ಭಾರತೀಯ ನೌಕರರಿಗೆ ಕೇಂದ್ರ ಸರಕಾರ ಸಹಾಯಹಸ್ತ ಚಾಚಿದ್ದು, ನೌಕರರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಯಾರು ಸ್ವದೇಶಕ್ಕೆ ವಾಪಸಾಗಲು ಬಯಸುತ್ತಾರೋ ಅವರಿಗೆ ರಿಟರ್ನ್ ಟಿಕೆಟ್ ಒದಗಿಸಿದ್ದು, ಯಾರು ಅಲ್ಲೇ ಇದ್ದು ಕೆಲಸ ಮಾಡಲು ಬಯಸುತ್ತಾರೋ, ಅವರ ಪರವಾನಗಿ ನವೀ ಕರಣಕ್ಕೆ ಕೇಂದ್ರ ಸರಕಾರ ಯತ್ನಿಸುತ್ತಿದೆ ಎಂದು ಸಚಿವೆ ಹರ್ಸಿಮ್ರತ್ ಕೌರ್ ಗುರುವಾರ ತಿಳಿಸಿದ್ದಾರೆ.
ಅಲ್ಲದೆ, ರಿಯಾದ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು 13 ನಿರ್ಮಾಣ ಸ್ಥಳಗಳಿಗೆ ಭೇಟಿ ನೀಡಲಿದ್ದು, ಕಾರ್ಮಿಕರ ಸ್ಥಿತಿ ಗತಿ ಬಗ್ಗೆ ಪರಿಶೀಲನೆ ನಡೆಸಲಿದೆ. ವೈದ್ಯಕೀಯ ಚಿಕಿತ್ಸೆ ಸೇರಿದಂತೆ ಅವರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುವ ನಿಟ್ಟಿವಲ್ಲಿ ಕಾರ್ಯ ಪ್ರವೃತ್ತವಾಗಲಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ. ಸೌದಿಯಲ್ಲಿರುವ 3 ಸಾವಿರ ಕಾರ್ಮಿಕರಿಗೆ ಹಲವು ತಿಂಗಳಿಂದ ವೇತನ ನೀಡಿಲ್ಲ, ಅವರ ವೀಸಾ ಮತ್ತು ವಸತಿ ಪರ ವಾನಗಿಯ ಅವಧಿಯೂ ಕೊನೆಗೊಂಡಿದೆ ಎಂಬ ವರದಿ ಹಿನ್ನೆಲೆಯಲ್ಲಿ ಕೌರ್ ಅವರು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ಗೆ ಈ ಮಾಹಿತಿ ತಲುಪಿಸಿ, ಸಹಾಯ ಕೋರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!