ಪಾಕಿಸ್ಥಾನದಲ್ಲಿ ಭಾರತೀಯ ರಾಜತಾಂತ್ರಿಕರಿಗೆ ಕೀಟಲೆ, ಕಿರುಕುಳ
Team Udayavani, Dec 22, 2018, 11:39 AM IST
ಹೊಸದಿಲ್ಲಿ : ಪಾಕಿಸ್ಥಾನದಲ್ಲಿ ಕರ್ತವ್ಯದ ಮೇಲೆ ವಾಸವಾಗಿರುವ ಅನೇಕ ಭಾರತೀಯ ರಾಜತಾಂತ್ರಿಕರಿಗೆ ನೆರೆಯ ದೇಶದಲ್ಲಿ ಕಿರುಕುಳ ನೀಡಲಾಗುತ್ತಿರುವ ಬಗ್ಗೆ ಅನೇಕ ದೂರುಗಳು ಬರುತ್ತಿವೆ.
ಭಾರತೀಯ ರಾಜತಾಂತ್ರಿಕರ ನಿವಾಸಗಳಿಗೆ ಹೊಸ ಗ್ಯಾಸ್ ಕನೆಕ್ಷನ್ ನಿರಾಕರಿಸುವುದು; ಅವರನ್ನು ಭೇಟಿಯಾಗಲು ಬರುವ ಅತಿಥಿಗಳಿಗೆ ಕಿರುಕುಳ ನೀಡುವುದು; ಕೆಲವು ಹಿರಿಯ ಅಧಿಕಾರಿಗಳ ಇಂಟರ್ನೆಟ್ ಸಂಪರ್ಕವನ್ನು ತಡೆಯುವುದು – ಇವೇ ಮೊದಲಾದ ರೀತಿಯಲ್ಲಿ ಭಾರತೀಯ ರಾಜತಾಂತ್ರಿಕರಿಗೆ ಪಾಕ್ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಳೆದ ಡಿ.10ರಂದು ಭಾರತೀಯ ರಾಜತಾಂತ್ರಿಕರೋರ್ವರ ಅಧಿಕೃತ ನಿವಾಸಕ್ಕೆ ಆಗಂತುಕನೋರ್ವ ಯಾವುದೇ ಬಗೆಯ ಭದ್ರತೆಯ ಅಡೆತಡೆಗಳಿಲ್ಲದೆ ನೇರವಾಗಿ ನುಗ್ಗಿ ಬಂದಿದ್ದ.
ಈ ಎಲ್ಲ ವಿದ್ಯಮಾನಗಳನ್ನು ಗಂಭೀರವಾಗಿ ಪರಿಗಣಿಸಿರುವ ವಿದೇಶ ವ್ಯವಹಾರಗಳ ಸಚಿವಾಲಯ ಈ ವಿಷಯವನ್ನು ಪಾಕ್ ಉನ್ನತರಲ್ಲಿ ಎತ್ತಿದೆ. ಈ ರೀತಿಯ ತೊಂದರೆಗಳನ್ನು ನೀಡಕೂಡದೆಂದು ಅದು ಸ್ಪಷ್ಟವಾಗಿ ತಿಳಿಸಿದೆ.
ಹಾಗೆ ನೋಡಿದರೆ ಪಾಕಿಸ್ಥಾನದಲ್ಲಿನ ಭಾರತೀಯ ರಾಜತಾಂತ್ರಿಕರಿಗೆ ಪಾಕ್ ಅಧಿಕಾರಿಗಳು ಕಿರುಕುಳ ನೀಡುವುದು ಇದೇ ಮೊದಲಲ್ಲ. ಈ ವರ್ಷ ಮಾರ್ಚ್ನಲ್ಲೂ ಪಾಕ್ ಅಧಿಕಾರಿಗಳು ಭಾರತೀಯ ರಾಜತಾಂತ್ರಿಕರಿಗೆ ಕಿರುಕುಳ ನೀಡಿದ್ದರು.
ವಿಚಿತ್ರವೆಂದರೆ ದಿಲ್ಲಿಯಲ್ಲಿನ ಪಾಕ್ ದೂತಾವಾಸದ ಅಧಿಕಾರಿಗಳು ಕೂಡ ತಮಗೆ ಕೂಡ ಭಾರತೀಯ ಅಧಿಕಾರಿಗಳು ಇದೇ ರೀತಿಯ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕಳೆದ ಮಾರ್ಚ್ 30ರಂದು ಉಭಯ ದೇಶಗಳು ಉನ್ನತ ಮಟ್ಟದ ಚರ್ಚೆ ನಡೆಸಿ ರಾಜತಾಂತ್ರಿಕರಿಗೆ ಸಂಬಂಧಿಸಿದ 1992ರ ನೀತಿ ಸಂಹಿತೆಗೆ ಅನುಗುಣವಾಗಿ ಈ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಬಗೆಹರಿಸಲು ಒಪ್ಪಿಕೊಂಡಿದ್ದವು. ಆದರೆ ಪಾಕ್ ಚಾಳಿ ಮಾತ್ರ ಅಂತೆಯೇ ಮುಂದುವರಿರಿದೆ ಎಂದು ಭಾರತೀಯ ದೂತಾವಾಸದ ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್