ರಥಯಾತ್ರೆ ದೇವರಿಗಾಗಿ, ದೊಂಬಿ ನಡೆಸಲು ಅಲ್ಲ: ಮಮತಾ ಬ್ಯಾನರ್ಜಿ
Team Udayavani, Dec 28, 2018, 12:37 PM IST
ಸಾಗರ ದ್ವೀಪ, ಪಶ್ಚಿಮ ಬಂಗಾಲ : ‘ದೇವರ ಹೆಸರಲ್ಲಿ ನಡೆಸಲಾಗುವ ರಥಯಾತ್ರೆಯನ್ನು ದೊಂಬಿ ಉದ್ದೇಶದಿಂದ ನಡೆಸಕೂಡದು’ ಎಂದು ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಜೆಪಿಯ ಪ್ರಸ್ತಾವಿತ ರಥಯಾತ್ರೆಯ ಬಗ್ಗೆ ಖಡಕ್ ಮಾತನ್ನು ಆಡಿದ್ದಾರೆ.
ಪಶ್ಚಿಮ ಬಂಗಾಲದಲ್ಲಿ ರಥಯಾತ್ರೆ ನಡೆಸುವುದಕ್ಕೆ ಅನುಮತಿ ನೀಡಬೇಕೆಂದು ಕೋರಿ ಬಿಜೆಪಿ ಸುಪ್ರೀಂ ಕೋರ್ಟ್ ಮೆಟ್ಟಲೇರಿದ್ದು ಅರ್ಜಿಯ ತುರ್ತು ವಿಚಾರಣೆಯನ್ನು ನ್ಯಾಯಾಲಯ ತಿರಸ್ಕರಿಸಿದೆ.
”ಭಗವಾನ್ ಕೃಷ್ಣ, ಭಗವಾನ್ ಜಗನ್ನಾಥರ ರಥಯಾತ್ರೆಗಳಲ್ಲಿ ನಾವೂ ಭಾಗಿಯಾಗುತ್ತೇವೆ. ಆದರೆ ಈ ರಥಯಾತ್ರೆ ಜನಸಮಾನ್ಯರನ್ನು ಕೊಲ್ಲುವ ದಂಗಾ ಯಾತ್ರೆಯಾಗಿದೆ; ಇಂಥವಕ್ಕೆ ಅವಕಾಶ ನೀಡಬಾರದು” ಎಂದು ಮಮತಾ ಬ್ಯಾನರ್ಜಿ ಅವರಿಂದು ಇಲ್ಲಿ ಸಾರ್ವಜನಿಕ ವಿತರಣ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಹೇಳಿದರು.
‘ನಾವು ಯಾರನ್ನೂ ಅವಮಾನಿಸುವುದಿಲ್ಲ; ನಾವು ಎಲ್ಲರನ್ನೂ ಎಲ್ಲ ಧರ್ಮದವರನ್ನೂ ಮತ್ತು ಅವರ ಧಾರ್ಮಿಕ ಭಾವನೆಗಳನ್ನು ಗೌರವಿಸುತ್ತೇವೆ’ ಎಂದು ಮಮತಾ ಹೇಳಿದರು.
ಬಿಜೆಪಿಯು ಪಶ್ಚಿಮ ಬಂಗಾಲದಲ್ಲಿ ನಡೆಸಲು ಉದ್ದೇಶಿಸಿರುವ ರಾಜಕೀಯ ರಥಯಾತ್ರೆಯು ಮೂರು ಹಂತಗಳಲ್ಲಿ ನಡೆಯಲಿದ್ದು ಅದಕ್ಕೆ ಪ್ರಜಾಸತ್ತೆ ಉಳಿಸಿ ರಾಲಿ ಎಂದೂ ಹೆಸರಿಸಲಾಗಿದೆ.
ಈ ರಥಯಾತ್ರೆಯು ಪಶ್ಚಿಮ ಬಂಗಾಲದ ಎಲ್ಲ 42 ಲೋಕಸಭಾ ಕ್ಷೇತ್ರಗಳನ್ನು ಒಳಗೊಳ್ಳುತ್ತದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಈ ಪ್ರಸ್ತಾವಿತ ರಥಯಾತ್ರೆಗೆ ಹಸಿರು ನಿಶಾನೆ ತೋರಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ