ಬಡ್ಡಿ ದರ ಪೂರ್ತಿ ಮನ್ನಾ?


Team Udayavani, Dec 29, 2018, 12:30 AM IST

interest-waiver.jpg

ನವದೆಹಲಿ: ಲೋಕಸಭೆ ಚುನಾವಣೆ ಹೊತ್ತಿಗೆ ಕೃಷಿ ವಲಯಕ್ಕೆ ಭರ್ಜರಿ ಯೋಜನೆಗಳನ್ನು ಪ್ರಕಟಿಸಿ ರೈತರ ಮನಗೆಲ್ಲುವ ಉತ್ಸಾಹದಲ್ಲಿರುವ ಕೇಂದ್ರ ಸರ್ಕಾರ, ನಿಗದಿತ ಅವಧಿಯಲ್ಲಿ ಮರುಪಾವತಿಯಾಗುವ ರೈತರ ಸಾಲಗಳ ಮೇಲೆ ಬಡ್ಡಿ ಮನ್ನಾ ಮಾಡಲು ಚಿಂತನೆ ನಡೆಸಿದೆ. ಜತೆಗೆ, ಹೊಲಗಳಲ್ಲಿ ಬೆಳೆಯುವ ಬೆಳೆಗಳ ವಿಮೆ ಪ್ರೀಮಿಯಂಗಳನ್ನು ಮನ್ನಾ ಮಾಡುವ, ತೋಟಗಾರಿಕೆ ಬೆಳೆಗಳ ಮೇಲಿನ ಪ್ರೀಮಿಯಂ ಅನ್ನು ಕಡಿತಗೊಳಿಸುವ ನಿರ್ಧಾರಗಳನ್ನು ಕೈಗೊಳ್ಳುವ ಅಂಶಗಳನ್ನು ಯೋಜನೆಗಳಲ್ಲಿ ಸೇರಿಸಲು ಆಲೋಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 

ಸದ್ಯಕ್ಕೆ ರೈತರು ಪಡೆಯುತ್ತಿರುವ ಸಾಮಾನ್ಯ ಕೃಷಿ ಸಾಲದ ಮೇಲೆ ಶೇ. 4ರಷ್ಟು ಬಡ್ಡಿ ವಿಧಿಸಲಾಗುತ್ತಿದೆ. ಅಲ್ಪಾವಧಿ ಕೃಷಿ ಸಾಲಗಳ ಮೇಲೆ ಶೇ. 7ರಷ್ಟು ಬಡ್ಡಿ ವಿಧಿಸಲಾಗುತ್ತಿದೆ. ಈಗ ಚಾಲ್ತಿಯಲ್ಲಿರುವಂತೆ ನಿಗದಿತ ಅವಧಿಯಲ್ಲಿ ಮರುಪಾವತಿ ಮಾಡುವ ಸಾಮಾನ್ಯ ಕೃಷಿ ಸಾಲದ ಮೇಲಿನ ಬಡ್ಡಿ ದರಕ್ಕೆ ಶೇ.2ರಷ್ಟು ರಿಯಾಯಿತಿ, ಅಲ್ಪಾವಧಿ ಕೃಷಿ ಸಾಲದ ಮೇಲಿನ ಬಡ್ಡಿಯಲ್ಲಿ ಶೇ. 5ರವರೆಗೆ ರಿಯಾಯಿತಿ ನೀಡಲಾಗುತ್ತಿದೆ. ಇವೆರಡರಿಂದಲೇ ಬೊಕ್ಕಸಕ್ಕೆ ಈಗ 15,000 ಕೋಟಿ ರೂ. ಹೊರೆ ಬೀಳುತ್ತಿದೆ. ಈ ಎಲ್ಲಾ ಕೃಷಿ ಸಾಲಗಳ ಬಡ್ಡಿ ಮನ್ನಾ ಮಾಡಿದರೆ ಒಟ್ಟು 30,000 ಕೋಟಿ ರೂ. ಹೊರೆ ಬೀಳಲಿದೆ ಎನ್ನಲಾಗಿದೆ. ಇನ್ನು, ಪ್ರಧಾನ ಮಂತ್ರಿ ಫ‌ಸಲ್‌ ಭಿಮಾ ಯೋಜನೆಯಡಿ ಬೆಳೆ ವಿಮೆಗಳಿಗಾಗಿ ರೈತರಿಂದ ವಾರ್ಷಿಕ 5,000 ಕೋಟಿ ರೂ. ಪ್ರೀಮಿಯಂ ಹರಿದುಬರುತ್ತಿದೆ. ಇದನ್ನು ಮನ್ನಾ ಮಾಡಿದರೆ, ಸರ್ಕಾರದ ಮೇಲೆ ಮತ್ತೆ 5,000 ಕೋಟಿ ರೂ. ಹೊರೆ ಬೀಳುತ್ತದೆ. 

ಈರುಳ್ಳಿ ಮೇಲಿನ ಪ್ರೋತ್ಸಾಹ ಧನ ಹೆಚ್ಚಳ 
ಈರುಳ್ಳಿ ಬೆಲೆ ಕುಸಿದಿರುವ ಹಿನ್ನೆಲೆಯಲ್ಲಿ ಈರುಳ್ಳಿ ರಫ್ತಿನ ಮೇಲೆ ವಿಧಿಸಲಾಗುತ್ತಿದ್ದ ಪ್ರೋತ್ಸಾಹ ಧನವನ್ನು ದ್ವಿಗುಣಗೊಳಿಸಲು ಕೇಂದ್ರ ತೀರ್ಮಾನಿಸಿದೆ. ಅದರಿಂದಾಗಿ, ಎಂಎಸ್‌ಐಎಎಸ್‌ ವತಿಯಿಂದ ರಫ್ತಾಗುವ ಈರುಳ್ಳಿಯ ಮೇಲೆ ಶೇ. 5ರಷ್ಟು ಇರುವ ಪ್ರೋತ್ಸಾಹ ಧನ ಇದನ್ನು ಶೇ. 10ಕ್ಕೆ ಏರಲಿದೆ. ಇದೇ ವರ್ಷ ಜುಲೈನಲ್ಲಿ ಈರುಳ್ಳಿ ರಫ್ತಿನ ಮೇಲೆ ಶೇ. 5ರಷ್ಟು ಪ್ರೋತ್ಸಾಹ ಧನ ವಿಧಿಸಲಾಗಿತ್ತು. 

3 ಆಯ್ಕೆಗಳ ಪರಿಶೀಲನೆ
ರೈತರ ಪ್ಯಾಕೇಜ್‌ಗೆ ಸಂಬಂಧಿಸಿ ಪ್ರಧಾನಿ ಮೋದಿ ಅವರು 3 ಆಯ್ಕೆಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವೆಂದರೆ, ಭೂಮಿ ಹೊಂದಿರುವ ರೈತರಿಗೆ ನೇರವಾಗಿ ಎಕರೆಗೆ 1,700-2 ಸಾವಿರ ರೂ. ಪಾವತಿಸುವುದು, ರೈತರು ತಮ್ಮ ಬೆಳೆಗಳನ್ನು ಮಾರಾಟ ಮಾಡಿದ ನಂತರ, ಸರ್ಕಾರ ನಿಗದಿಪಡಿಸಿದ ಬೆಲೆಗೂ, ಅವರು ಮಾರಾಟ ಮಾಡಿದ ಬೆಲೆಗೂ ನಡುವೆ ಇರುವ ಅಂತರದ ಮೊತ್ತವನ್ನು ಸರ್ಕಾರವೇ ಭರಿಸುವುದು ಮತ್ತು ಪ್ರತಿ ವ್ಯಕ್ತಿಯ 1 ಲಕ್ಷ ರೂ.ವರೆಗಿನ ಬೆಳೆ ಸಾಲವನ್ನು ಮನ್ನಾ ಮಾಡುವುದು. ಈ ಪೈಕಿ ಮೊದಲನೆಯ ಯೋಜನೆಗೆ 1 ಲಕ್ಷ ಕೋಟಿ ರೂ, ಎರಡನೆಯದಕ್ಕೆ 50,000 ಕೋಟಿ ರೂ. ಹಾಗೂ ಮೂರನೆಯ ಯೋಜನೆಗೆ ಬರೋಬ್ಬರಿ 3 ಲಕ್ಷ ಕೋಟಿ ರೂ.ಗಳಷ್ಟು ಹೊರೆ ಸರ್ಕಾರದ ಬೊಕ್ಕಸದ ಮೇಲೆ ಬೀಳಲಿದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.