ಬಾಂಗ್ಲಾದಲ್ಲಿ ಶೇಖ್ ಹಸೀನಾಗೆ ಜಯಭೇರಿ, ಹಿಂಸಾಚಾರಕ್ಕೆ 17 ಬಲಿ
Team Udayavani, Dec 31, 2018, 4:51 AM IST
ಢಾಕಾ:ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಮೈತ್ರಿಕೂಟ ಭರ್ಜರಿ ಜಯಭೇರಿ ಬಾರಿಸುವ ಮೂಲಕ ಶೇಖ್ ನಾಲ್ಕನೇ ಬಾರಿ ಪ್ರಧಾನಿಯಾಗಿ ಗದ್ದುಗೆ ಏರಿದಂತಾಗಿದೆ. ಚುನಾವಣೆಯಲ್ಲಿ ನಕಲಿ ಮತದಾನ ನಡೆಸಲಾಗಿದೆ, ಮರು ಚುನಾವಣೆ ನಡೆಸಬೇಕೆಂದು ವಿಪಕ್ಷಗಳು ಆಗ್ರಹಿಸಿ ನಡೆಸಿದ ಹಿಂಸಾಚಾರದಲ್ಲಿ 17 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
300 ಸದಸ್ಯ ಬಲದ ಸಂಸತ್ ನಲ್ಲಿ ಆಡಳಿತಾರೂಢಾ ಶೇಖ್ ಹಸೀನಾ ಅವಾಮಿ ಲೀಗ್ ಪಕ್ಷ ಮತ್ತು ಮೈತ್ರಿಕೂಟ 288 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಪ್ರಮುಖ ವಿರೋಧ ಪಕ್ಷ ಕೇವಲ ಆರು ಸ್ಥಾನಗಳಲ್ಲಿ ಜಯ ಸಾಧಿಸಿದೆ ಎಂದು ಚುನಾವಣಾ ಆಯೋಗದ ಕಾರ್ಯದರ್ಶಿ ಹೇಲಾಲ್ ಉದ್ದೀನ್ ಅಹ್ಮದ್ ತಿಳಿಸಿದ್ದಾರೆ.
2014ರ ಸಾರ್ವತ್ರಿಕ ಚುನಾವಣೆಯನ್ನು ಬಹಿಷ್ಕರಿಸಿದ್ದ ಬಾಂಗ್ಲಾದೇಶ್ ನ್ಯಾಶನಲಿಷ್ಟ್ ಪಾರ್ಟಿ ಧೂಳೀಪಟವಾಗಿದೆ. ಏತನ್ಮಧ್ಯೆ ಬಾಂಗ್ಲಾದೇಶದಲ್ಲಿ ಮತ್ತೆ ಚುನಾವಣೆ ನಡೆಸಬೇಕೆಂದು ನ್ಯಾಶನಲ್ ಯೂನಿಟಿ ಫ್ರಂಟ್ ನೇತೃತ್ವದ ಬಿಎನ್ ಪಿ ಮೈತ್ರಿಕೂಟದ ಮುಖಂಡ ಕಮಲ್ ಹುಸೈನ್ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ