ಉದ್ಧವ್‌ ಟೀಕೆಗೆ ಸೂಕ್ತ ಸಮಯದಲ್ಲಿ ಉತ್ತರ: ಸಿಎಂ ಫಡ್ನವೀಸ್‌


Team Udayavani, Jan 2, 2019, 6:06 AM IST

devendra-fadnavis.jpg

ಮುಂಬಯಿ: ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧದ ಶಿವಸೇನೆ ಮುಖ್ಯಸ್ಥ ಉದ್ಧವ್‌ ಠಾಕ್ರೆ ಅವರ ಚೌಕಿದಾರ್‌ ಕುರಿತ ಟೀಕೆಗೆ ಸರಿಯಾದ ಸಮಯದಲ್ಲಿ ಸೂಕ್ತ ಉತ್ತರ  ನೀಡಲಾಗುವುದು ಎಂದು ಮುಖ್ಯಮಂತ್ರಿ  ಫಡ್ನವೀಸ್‌  ತಿಳಿಸಿದ್ದಾರೆ.

ಇತ್ತೀಚೆಗೆ ಪಂಢರಾಪುರದಲ್ಲಿ ನಡೆದ ರ್ಯಾಲಿಯೊಂದರಲ್ಲಿ ಠಾಕ್ರೆ ಕಾವಲುಗಾರರು ಕಳ್ಳರಾಗಿದ್ದಾರೆ ಎಂಬ ಕಾಂಗ್ರೆಸ್‌ ಘೋಷಣೆಗೆ ಧ್ವನಿಗೂಡಿಸಿದ್ದರು. ಒಂದು ಸಮಯದಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ರಫೇಲ್‌ ಒಪ್ಪಂದಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ವಿರುದ್ಧ ಚೌಕಿದಾರ್‌ ಚೋರ್‌ ಹೈ (ಕಾವಲುಗಾರ ಕಳ್ಳನಾಗಿದ್ದಾನೆ) ಎಂದು ಟೀಕಾಪ್ರಹಾರ ಮಾಡಿ ಚರ್ಚೆಗೆ ಗ್ರಾಸವಾಗಿದ್ದರು.

ಸೋಮವಾರ ಇಲ್ಲಿನ ಸಹ್ಯಾದ್ರಿ ಅತಿಥಿ ಗೃಹದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಫಡ್ನವೀಸ್‌ ಅವರು, ಪ್ರತಿಯೊಂದು ಪ್ರತ್ಯುತ್ತರವು ತನ್ನದೇ ಆದ ಸಮಯವನ್ನು ಹೊಂದಿದ್ದು, ಅದಕ್ಕಾಗಿ ಕಾಯಬೇಕಾಗಿದೆ. ಯಾರು ಯಾವ ಸಂದರ್ಭದಲ್ಲಿ ಏನನ್ನು ಹೇಳಿರುವರೋ ಅದಕ್ಕೆ ನಾವು ಸರಿಯಾದ ಸಮಯದಲ್ಲಿ ಸೂಕ್ತವಾದ ಪ್ರತ್ಯುತ್ತರವನ್ನು ನೀಡುತ್ತೇವೆ ಎಂದರು. ಆದಾಗ್ಯೂ, ಕೂಡಲೇ ಅವರು, ಎರಡೂ ಪಕ್ಷಗಳು ಮುಂಬರುವ ಚುನಾವಣೆ ಗಳಲ್ಲಿ ಒಟ್ಟಾಗಿ ಸ್ಪರ್ಧಿಸಲಿವೆ ಎಂದೂ ಪುನರುಚ್ಚರಿಸಿದರು.

ಮುಂಬರುವ ಚುನಾವಣೆಗಳಲ್ಲಿ ಎರಡೂ ಪಕ್ಷಗಳು ಕಾಂಗ್ರೆಸ್‌-ರಾಷ್ಟ್ರವಾದಿ ಕಾಂಗ್ರೆಸ್‌ ಪಕ್ಷ (ಎನ್‌ಸಿಪಿ) ಮೈತ್ರಿಕೂಟದ ವಿರುದ್ಧ  ಸ್ಪರ್ಧಿಸಿ  ಎನ್‌ಡಿಎ ಸರಕಾರವನ್ನು ಮರಳಿ ಆಡಳಿತಕ್ಕೆ ತರಲಿದೆ ಎಂದವರು ಪ್ರತಿಪಾದಿಸಿದ್ದಾರೆ.

ಪ್ರಧಾನಿ ಮೋದಿ ವಿರುದ್ಧದ ಶಿವಸೇನೆಯ ಟೀಕೆಗಳಿಗೆ ನಾವು ಪ್ರಾಮುಖ್ಯತೆ ನೀಡುವು ದಿಲ್ಲ. ಇಂತಹ ಟೀಕಾ-ಟಿಪ್ಪಣಿಗಳು ಉರಿಯುವ ಸೂರ್ಯನ ಮೇಲೆ ಉಗುಳುವ ಹಾಗೆ. ಮೋದಿ ಅವರು ದೇಶಕ್ಕಾಗಿ ತಮ್ಮ ಕುಟುಂಬದ ಬಗ್ಗೆ ಯೋಚಿಸದೆ ಅಥವಾ ಯಾವುದೇ ವೈಯಕ್ತಿಕ ಲಾಭಗಳಿಲ್ಲದೆ ನಿಸ್ವಾರ್ಥವಾಗಿ ಕೆಲಸ ಮಾಡುತ್ತಿದ್ದಾರೆ. ಇದು ದೇಶದಲ್ಲಿ ಮೊದಲ ಬಾರಿಗೆ ನಡೆಯುತ್ತಿರುವುದಾಗಿದೆ ಎಂದರು.

ಎನ್‌ಸಿಪಿ ಜತೆ ಕೈಜೋಡಿಸಿರಲಿಲ್ಲ 
ಅಹ್ಮದ್‌ನಗರದಲ್ಲಿ ಮೇಯರ್‌ ಸ್ಥಾನವನ್ನು ಪಡೆಯಲು ಬಿಜೆಪಿ ಎನ್‌ಸಿಪಿಯೊಂದಿಗೆ ಕೈಜೋಡಿಸಿ ರಲಿಲ್ಲ.  ವಾಸ್ತವವಾಗಿ  ನಾವು ಶಿವಸೇನೆಗೆ ಬೇಷರತ್‌ ಬೆಂಬಲ ನೀಡಲು ಬಯಸಿದ್ದೆವು ಎಂದು ಫ‌ಡ್ನವೀಸ್‌ ಅವರು   ಹೇಳಿದ್ದಾರೆ. ಶಿವಸೇನೆಯು ಮೈತ್ರಿಯ ಪ್ರಸ್ತಾವ ಅಥವಾ ವಿನಂತಿಯೊಂದಿಗೆ ಮುಂದೆ ಬಂದರೆ ಅದರೊಂದಿಗೆ ಮೈತ್ರಿಮಾಡಿಕೊಳ್ಳುವಂತೆ ನಾನು ನಮ್ಮ ಪಕ್ಷದ ನಾಯಕರಿಗೆ ಸೂಚನೆ ನೀಡಿದ್ದೆ. ಕೊನೆಯ ನಿಮಿಷದವರೆಗೂ ನಾವು ಕಾದುಕುಳಿತಿದ್ದೆವು, ಆದರೆ ಶಿವಸೇನೆ ನಮಗೆ ಯಾವುದೇ ಪ್ರಸ್ತಾವವನ್ನು ನೀಡಿಲಿಲ್ಲ. ಅಂತೆಯೇ, ನಾವು ಎನ್‌ಸಿಪಿಯಿಂದಲೂ ಬೆಂಬಲವನ್ನು ಕೇಳಿರಲಿಲ್ಲ. ಅವರು ಸ್ವ-ಇಚ್ಛೆಯಿಂದ ನಮಗೆ ಬೆಂಬಲ ನೀಡಿದರು. ಆದ್ದರಿಂದ, ಈ ಬಗ್ಗೆ  ಎನ್‌ಸಿಪಿಯನ್ನು  ಪ್ರಶ್ನಿಸಬೇಕೇ ಹೊರತೂ ನಮ್ಮನ್ನಲ್ಲ ಎಂದು ಸಿಎಂ ಫ‌ಡನ್ವೀಸ್‌ ನುಡಿದಿದ್ದಾರೆ.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.